ನವದೆಹಲಿ: ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಗುಜರಾತ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ ನಂತರದ ಜನಸೇವೆಯಲ್ಲಿ 20 ವರ್ಷಗಳನ್ನು ಪೂರೈಸಿದ್ದಾರೆ.
ಅಕ್ಟೋಬರ್ 7, 2001 ರಂದು, ಮೋದಿಯವರು ಮೊದಲು ಗುಜರಾತ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಮೋದಿಯವರ 20 ವರ್ಷಗಳ ಸುದೀರ್ಘ ಸಾರ್ವಜನಿಕ ಸೇವೆಯ ಪ್ರಯಾಣವು ಭಾರತವನ್ನು ಸಮೃದ್ಧ ಮತ್ತು ಪ್ರಬಲ ಜಾಗತಿಕ ನಾಯಕನನ್ನಾಗಿಸುವಲ್ಲಿ ಮಹತ್ವದ ಕೊಡುಗೆ ನೀಡಿದೆ. ಅವರ ರಾಷ್ಟ್ರ ಮೊದಲು ಎಂಬ ಧ್ಯೇಯವು ಅಭಿವೃದ್ಧಿಗೆ ಪ್ರೇರಣೆ ನೀಡುತ್ತಿದೆ.
ಮುಖ್ಯಮಂತ್ರಿಯಾಗಿ ಅವರು ಗುಜರಾತ್ ಮಾದರಿಯನ್ನು ಮುಂದಿಟ್ಟು ಅಭಿವೃದ್ಧಿಗೆ ಹೊಸ ಆಯಾಮ ನೀಡಿದರು. ಅವರು 2014 ರಲ್ಲಿ ಪ್ರಧಾನಿಯಾದಾಗ ಜನರ ಮೂಲಭೂತ ಅಗತ್ಯಗಳನ್ನು ಪೂರೈಸುವ ಮೂಲಕ ಪ್ರಗತಿಯಹೊಸ ಯುಗವನ್ನು ಆರಂಭಿಸಿದರು. ಅವರು ಪ್ರಧಾನ ಮಂತ್ರಿ ಜನ್-ಧನ್ ಯೋಜನೆ (PMJDY) ಯನ್ನು ಜಾರಿಗೊಳಿಸುವ ಮೂಲಕ ಬ್ಯಾಂಕ್ ಖಾತೆಗಳನ್ನು ಎಲ್ಲರೂ ಹೊಂದುವಂತೆ ಮಾಡಿದರು, ಬಡವರಿಗೆ ಜೀವ, ಆರೋಗ್ಯ ಮತ್ತು ವಿಮಾ ರಕ್ಷಣೆ ಮತ್ತು ಬಡ್ಡಿ ರಹಿತ ಸಾಲ ಸಿಗುವಂತೆ ಮಾಡಿದರು. ಅವರ ಆಡಳಿತದಲ್ಲಿ ಭಾರತವು ವಿಶ್ವದ ಅಗ್ರ ಡಿಜಿಟಲ್ ಪಾವತಿ ಪರಿಸರ ವ್ಯವಸ್ಥೆಯಾಗಿದೆ ಮತ್ತು ಟೆಕ್ ಪ್ಲಾಟ್ಫಾರ್ಮ್ಗಳಾದ JAM ಟ್ರಿನಿಟಿ, ಯುಪಿಐ ಮತ್ತು ಕೋವಿನ್ ಜಾಗತಿಕವಾಗಿ ಮೆಚ್ಚುಗೆ ಪಡೆಯುತ್ತಿದೆ.
ರಾಷ್ಟ್ರೀಯ ಹಿತಾಸಕ್ತಿಗಾಗಿ ಪ್ರಧಾನಿಯವರು ದೊಡ್ಡ ಮತ್ತು ದಿಟ್ಟ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ಪಿಎಂ- ಕಿಸಾನ್ ಭಾರತದ ಅತಿದೊಡ್ಡ ರೈತ ಪರ ಯೋಜನೆಗಳಲ್ಲಿ ಒಂದಾಗಿದೆ. ಅವರ ಆಡಳಿತದಲ್ಲಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಮತ್ತು ಹಣಕಾಸು ದಿವಾಳಿತನ, ಬ್ಯಾಂಕಿಂಗ್ಗೆ ಸಂಬಂಧಿಸಿದ ದೊಡ್ಡ ಸುಧಾರಣೆಗಳನ್ನು ತರಲಾಗಿದೆ. ನರೇಂದ್ರ ಮೋದಿ ಸರ್ಕಾರವು ಭಯೋತ್ಪಾದನೆ ಬಗ್ಗೆ ಶೂನ್ಯ ಸಹಿಷ್ಣುತೆಯನ್ನು ಅಳವಡಿಸಿಕೊಂಡಿದೆ ಮತ್ತು ವಿಸ್ತರಣೆವಾದಿಗಳ ಕೃತ್ಯಕ್ಕೆ ದಿಟ್ಟ ಪ್ರತ್ಯುತ್ತರಗಳನ್ನು ನೀಡಲಾಗಿದೆ.
ಪ್ರಧಾನಿ ಮೋದಿಯವರ ಕಾರಣದಿಂದ ಜಮ್ಮು ಮತ್ತು ಕಾಶ್ಮೀರವು ಭಾರತದ ಇತರ ರಾಜ್ಯಗಳಂತೆ ದೇಶದ ಅವಿಭಾಜ್ಯ ರಾಜ್ಯವಾಗಿ ಹೊರಹೊಮ್ಮಿದೆ. ಮಾತ್ರವಲ್ಲದೆ ಅಭಿವೃದ್ಧಿಯ ಪಥದಲ್ಲಿ ಕ್ಷಿಪ್ರ ಹೆಜ್ಜೆಗಳನ್ನು ಇಡುತ್ತಿದೆ.
ಒಟ್ಟಾರೆಯಾಗಿ ಗುಜರಾತ್ ಮುಖ್ಯಮಂತ್ರಿಯಾಗಿ ಮತ್ತು ದೇಶದ ಪ್ರಧಾನಿಯಾಗಿ ಮೋದಿಯವರ 20ವರ್ಷಗಳ ಪಯಣವು ಅಭೂತಪೂರ್ವವಾಗಿದೆ. ಸೋಲಿಲ್ಲದ ಸರದಾರನಾಗಿ ಅವರು ಜನ ಸೇವೆಯಲ್ಲಿ ತಮ್ಮನ್ನು ತಾವು ನಿರಂತರವಾಗಿ ತೊಡಗಿಸಿಕೊಂಡು ಬಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.