ಮಂಗಳೂರು: ಪ್ರಧಾನಿ ಮೋದಿ ಅವರ ಕನಸಿನಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಸುಸಜ್ಜಿತವಾದ ಆಕ್ಸಿಜನ್ ಘಟಕವನ್ನು ಆರಂಭ ಮಾಡಲಾಗಿದೆ.
ವೆನ್ಲಾಕ್ನಲ್ಲಿ ಬೃಹತ್ ಗಾತ್ರದ ವೈದ್ಯಕೀಯ ಆಮ್ಲಜನಕ ಘಟಕವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಲೋಕಾರ್ಪಣೆ ಮಾಡಿದ್ದಾರೆ.
ಬಳಿಕ ಮಾತನಾಡಿದ ಅವರು, ಈ ಘಟಕವು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಪ್ರಯೋಜನಕಾರಿಯಾಗಿರಲಿದೆ. ಕೋವಿಡ್ನಂತಹ ಮಾರಕ ಖಾಯಿಲೆಗಳು ಎದುರಾದ ಸಂದರ್ಭದಲ್ಲಿ ಅದನ್ನು ಸಮರ್ಥವಾಗಿ ಎದುರಿಸಲು ವೆನ್ಲಾಕ್ ಸಜ್ಜಾಗಿದೆ ಎಂದು ತಿಳಿಸಿದ್ದಾರೆ. ಅಗತ್ಯವಿರುವ ವೆಂಟಿಲೇಟರ್ಗಳು, ಹಾಸಿಗೆ, ಆಕ್ಸಿಜನ್ ಘಟಕ ಸೇರಿದಂತೆ ಇನ್ನಿತರ ಎಲ್ಲಾ ರೀತಿಯ ಸೌಲಭ್ಯಗಳು ಲಭ್ಯವಿರುವುದಾಗಿ ಅವರು ತಿಳಿಸಿದ್ದಾರೆ.
ಇದೀಗ ಮೊದಲ ಆಮ್ಲಜನಕ ಘಟಕ ವೆನ್ಲಾಕ್ನಲ್ಲಿ ಕಾರ್ಯಾರಂಭ ಮಾಡಲು ಪ್ರಾರಂಭಿಸಿದೆ. ಇದಲ್ಲದೆ ಜಿಲ್ಲೆಯ ಇನ್ನೂ 15 ಕಡೆಗಳಲ್ಲಿ ಆಕ್ಸಿಜನ್ ಘಟಕಗಳನ್ನು ಆರಂಭಿಸಲಾಗುವುದು ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.