ಶ್ರೀನಗರ: ಕಾಶ್ಮೀರದಲ್ಲಿ ಇತ್ತೀಚಿಗೆ ನಡೆಯುತ್ತಿರುವ ಭಯೋತ್ಪಾದಕ ದಾಳಿಗಳ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು, ಪ್ರತಿ ಮುಗ್ಧ ನಾಗರಿಕರ ರಕ್ತಕ್ಕೂ ಪ್ರತಿಕಾರ ತೀರಿಸಲಿದ್ದೇವೆ ಎಂದಿದ್ದಾರೆ.
ಭಯೋತ್ಪಾದಕ ಸನ್ನಿವೇಶವನ್ನು ಸಂಪೂರ್ಣವಾಗಿ ಧ್ವಂಸ ಮಾಡುತ್ತೇವೆ ಎಂದು ಮನೋಜ್ ಸಿನ್ಹಾ ಅವರು ಜಮ್ಮು ಮತ್ತು ಕಾಶ್ಮೀರದ ಜನತೆಗೆ ಭರವಸೆಯನ್ನು ನೀಡಿದ್ದಾರೆ.
“ಭಯೋತ್ಪಾದನಾ ದಾಳಿಯಲ್ಲಿ ಹುತಾತ್ಮರಾದ ನಾಗರಿಕರಿಗೆ ಶ್ರದ್ಧಾಂಜಲಿ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಸಂತಾಪ. ಕೇಂದ್ರಾಡಳಿತ ಪ್ರದೇಶ ಮತ್ತು ಇಡೀ ದೇಶ ಈ ಸಂಕಷ್ಟದ ಸಂದರ್ಭದಲ್ಲಿ ಸಂತ್ರಸ್ತರ ಕುಟುಂಬದೊಂದಿಗೆ ನಿಲ್ಲುತ್ತದೆ” ಎಂದಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಮತ್ತು ಇಡೀ ದೇಶದ ಜನತೆ ಭಯೋತ್ಪಾದನೆ ಕೃತ್ಯದ ಬಗ್ಗೆ ಆಕ್ರೋಶಿತರಾಗಿದ್ದಾರೆ ಎಂದಿದ್ದಾರೆ.
“ಪ್ರತಿಯೊಬ್ಬರೂ ನ್ಯಾಯ ಬಯಸುತ್ತಿದ್ದಾರೆ. ಮಾನವೀಯತೆಯ ಶತ್ರುಗಳನ್ನು ನಿರ್ಮೂಲನೆ ಮಾಡಲು ನಾವು ಭದ್ರತಾ ಪಡೆಗಳಿಗೆ ಸ್ವಾತಂತ್ರ್ಯ ನೀಡುತ್ತೇವೆ ಮತ್ತು ಶೀಘ್ರದಲ್ಲೇ ಭಯೋತ್ಪಾದಕರು ಮತ್ತು ಅವರಿಗೆ ನೆರವು ನೀಡುವವರು ತಮ್ಮ ಅಮಾನವೀಯ ಕೃತ್ಯಕ್ಕೆ ತಕ್ಕ ಬೆಲೆ ತೆರಲಿದ್ದಾರೆ” ಎಂದಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಎರಡು ವರ್ಷಗಳಿಂದ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳು ನೆರೆಯ ದೇಶ ಮತ್ತು ಭಯೋತ್ಪಾದಕ ಬೆಂಬಲಿಗರ ಕಣ್ಣು ಕುಕ್ಕುತ್ತಿದೆ. ಉತ್ಪಾದನೆಯ ಸನ್ನಿವೇಶವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುತ್ತೇವೆ ಎಂದು ಜನತೆಗೆ ಭರವಸೆ ನೀಡಲು ನಾನು ಬಯಸುತ್ತೇನೆ ಎಂದಿದ್ದಾರೆ.
आतंक के सरपरस्तों को भी मैं कहना चाहता हूँ, जम्मू कश्मीर में शांति, विकास और समृद्धि की यात्रा को अस्थिर करने के उनके मंसूबे कभी कामयाब नहीं होंगे।
— Manoj Sinha (@manojsinha_) October 7, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.