ಶ್ರೀನಗರ: ಇತ್ತೀಚೆಗೆ ಕಾಶ್ಮೀರ ಕಣಿವೆಯಲ್ಲಿ ನಡೆದ ಭಯೋತ್ಪಾದನಾ ಕೃತ್ಯಗಳು, ವಿಶೇಷವಾಗಿ ಅಲ್ಪಸಂಖ್ಯಾತ ಸಮುದಾಯಗಳ ಸದಸ್ಯರ ಹತ್ಯೆಗಳು ಹತ್ಯೆಗಳು 2000 ರಲ್ಲಿ ಅನಂತನಾಗ್ನ ಚಟ್ಟಿಸಿಂಗ್ಪೋರಾ ಗ್ರಾಮದಲ್ಲಿ ನಡೆದ 36 ಸಿಖ್ಖರ ಹತ್ಯಾಕಾಂಡದ ಘಟನೆಯನ್ನು ಮತ್ತೊಮ್ಮೆ ನೆನಪಿಸುತ್ತಿದೆ.
ಪಾಕಿಸ್ಥಾನ ಬೆಂಬಲಿತ ತಾಲಿಬಾನ್ ಅಫ್ಘಾನಿಸ್ತಾನದ ನಿಯಂತ್ರಣವನ್ನು ಪಡೆದುಕೊಂಡ ನಂತರ ಭಯೋತ್ಪಾದನೆಯನ್ನು ಪುನರುಜ್ಜೀವನಗೊಳಿಸುವ ಘಟನೆಗಳು ಕಾಶ್ಮೀರದಲ್ಲಿ ನಡೆಯುತ್ತಿದೆ. ಈ ಘಟನೆಗಳು ಭಯೋತ್ಪಾದನೆ ಕೃತ್ಯಗಳನ್ನು ಎದುರಿಸಲು ಸಮಗ್ರ ಕಾರ್ಯವಿಧಾನ ಅಳವಡಿಸಿಕೊಳ್ಳುವ ಅನಿವಾರ್ಯತೆ ಸೃಷ್ಟಿಸಿದೆ.
ಶ್ರೀನಗರ ಜಿಲ್ಲೆಯ ಸಂಗಮ್ ಈದ್ಗಾ ಪ್ರದೇಶದ ಸರ್ಕಾರಿ ಬಾಲಕರ ಹೈಯರ್ ಸೆಕೆಂಡರಿ ಶಾಲೆಯ ಸಿಖ್ ಪ್ರಾಂಶುಪಾಲರಾದ ಸುಪಿಂದರ್ ಕೌರ್ ಮತ್ತು ಅದೇ ಶಾಲೆಯ ಹಿಂದೂ ಶಿಕ್ಷಕ ದೀಪಕ್ ಚಂದ್ ಅವರ ಹತ್ಯೆಯ ನಂತರ, ಕಣಿವೆಯ ಸಿಖ್ ಸಮುದಾಯವು ಪ್ರತಿಭಟನೆಗೆ ಮುಂದಾಗಿದೆ ಮತ್ತು ಕಾಶ್ಮೀರದಲ್ಲಿ ಕೆಲಸ ಮಾಡುವ ಸಿಖ್ ಸರ್ಕಾರಿ ನೌಕರರಿಗೆ ತಮ್ಮ ಕರ್ತವ್ಯಗಳನ್ನು ಬಹಿಷ್ಕರಿಸುವಂತೆ ಕರೆ ನೀಡಿದೆ.
ಎಲ್ಲಾ ಪಕ್ಷಗಳ ಸಿಖ್ ಸಮನ್ವಯ ಸಮಿತಿಯ (ಎಪಿಎಸ್ಸಿಸಿ) ಅಧ್ಯಕ್ಷ ಜಗಮೋಹನ್ ಸಿಂಗ್ ರೈನಾ ಈ ಬಗ್ಗೆ ಮಾಹಿತಿ ನೀಡಿ, “ಚತ್ತಿಸಿಂಗೊಪೋರಾ ಹತ್ಯಾಕಾಂಡವನ್ನು ನೆನಪಿಸಿದ ಇತ್ತೀಚಿನ ಹತ್ಯೆಯ ಬಗ್ಗೆ ನಾವು ತುಂಬಾ ಚಿಂತಿತರಾಗಿದ್ದೇವೆ, ಸಮುದಾಯದ ಪ್ರತಿನಿಧಿಗಳು ಪರಿಸ್ಥಿತಿಯನ್ನು ಚರ್ಚಿಸಲು ಸಭೆ ನಡೆಸಿದ್ದಾರೆ ಮತ್ತು ಕಾಶ್ಮೀರದ ಸಿಖ್ ಸರ್ಕಾರಿ ನೌಕರರು ತಮ್ಮ ಕರ್ತವ್ಯಗಳನ್ನು ಬಹಿಷ್ಕರಿಸುವಂತೆ ಮತ್ತು ಸರ್ಕಾರವು ತಮ್ಮ ಭದ್ರತೆಯನ್ನು ಖಚಿತಪಡಿಸಿಕೊಳ್ಳುವವರೆಗೂ ಮನೆಯಲ್ಲಿಯೇ ಇರುವಂತೆ ಕರೆನೀಡಲಾಗಿದೆ” ಎಂದಿದ್ದಾರೆ.
ಈದ್ಗಾ ಘಟನೆಯ ಎರಡು ದಿನಗಳ ಮೊದಲು ಹಿಂದೂವಾದ ಪಂಡಿತ್ ಮಖನ್ ಲಾಲ್ ಬಿಂದ್ರೂ, ವೀರೇಂದ್ರ ಪವನ್ ಮತ್ತು ಮೊಹಮ್ಮದ್ ಶಾಫಿ ಅವರನ್ನು ಉಗ್ರರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ಈ ಘಟನೆಗೆ ಪ್ರತಿಕ್ರಿಯಿಸಿದ ಶಿರೋಮಣಿ ಅಕಾಲಿದಳ (ಬಿ) ಅಧ್ಯಕ್ಷ ಸುಖಬೀರ್ ಸಿಂಗ್ ಬಾದಲ್, “ಇತ್ತೀಚೆಗೆ ಅಲ್ಪಸಂಖ್ಯಾತ ಸಮುದಾಯದ ಸದಸ್ಯರ ಹತ್ಯೆಯನ್ನು ನಡೆಸಲಾಗುತ್ತಿದೆ. ಅಲ್ಪಸಂಖ್ಯಾತರನ್ನು ವ್ಯವಸ್ಥಿತವಾಗಿ ಗುರಿಯಾಗಿಸಲಾಗುತ್ತಿದೆ. ಅಲ್ಪಸಂಖ್ಯಾತರ ಭದ್ರತೆ ಬಗ್ಗೆ ಆತಂಕ ಸೃಷ್ಟಿಸಿದೆ. ಕಣಿವೆಯಲ್ಲಿ ಇಬ್ಬರು ಶಿಕ್ಷಕರ ಹತ್ಯೆ ಆಘಾತಕಾರಿ ಘಟನೆಯಾಗಿದ್ದು, ಕಣಿವೆಯಲ್ಲಿ ವಾಸಿಸುತ್ತಿರುವ ಅಲ್ಪಸಂಖ್ಯಾತ ಸಮುದಾಯಗಳಲ್ಲಿ ಭಯದ ಭಾವನೆ ಮೂಡಿಸಲು ಪ್ರಯತ್ನಿಸಲಾಗುತ್ತಿದೆ “ಎಂದು ಅವರು ಹೇಳಿದ್ದಾರೆ.
ಕಣಿವೆಯಲ್ಲಿ ಸುಮಾರು ಐವತ್ತು ಸಾವಿರ ಸಂಖ್ಯೆಯಲ್ಲಿರುವ ಸಿಖ್ಖರು ಪುಲ್ವಾಮಾ, ಬಾರಾಮುಲಾ, ಬದ್ಗಾಮ್ ಮತ್ತು ಶ್ರೀನಗರ ಜಿಲ್ಲೆಗಳಲ್ಲಿ ವಾಸಿಸುತ್ತಿದ್ದಾರೆ. ಹಿಂದುಗಳು ಕೂಡ ಜಮ್ಮು ಮತ್ತು ಕಾಶ್ಮೀರದಲ್ಲಿ ಅಲ್ಪಸಂಖ್ಯಾತರಾಗಿದ್ದಾರೆ. ಎರಡು ಸಮುದಾಯಗಳು ನಿರಂತರವಾಗಿ ಮುಸ್ಲಿಂ ಭಯೋತ್ಪಾದಕರಿಂದ ಸವಾಲುಗಳನ್ನು ಎದುರಿಸುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.