ಬೆಂಗಳೂರು: ಬಿಜೆಪಿ ಒಂದು ಸಮುದಾಯಕ್ಕೆ ಸೀಮಿತವಾದ ಪಕ್ಷವಲ್ಲ. ಅದು ಸಮಾಜದ ಎಲ್ಲಾ ವರ್ಗಗಳನ್ನು ಸಹ ತಲುಪಿ, ಅವರ ಬೆಂಬಲ ಗಳಿಸಿರುವ ಪಕ್ಷ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಅವರು ನವದೆಹಲಿಯಲ್ಲಿ ಇಂಡಿಯಾ ಟುಡೇ ಕಾನ್ಕ್ಲೇವ್ನಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕದ ಭಾಗದಿಂದ ಹಲವು ಮಂದಿ ಲಿಂಗಾಯತ ಮೂಲದವರು ಭಾರತೀಯ ಜನತಾ ಪಕ್ಷದಲ್ಲಿ ಸ್ಥಾನ ಪಡೆದಿದ್ದಾರೆ. ಆದರೆ ಒಂದು ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಎಲ್ಲಾ ವರ್ಗದ ಜನರ ಬೆಂಬಲ ಬೇಕು. ಈ ಬೆಂಬಲವನ್ನು ಜನರು ಬಿಜೆಪಿಗೆ ನೀಡಿದ್ದಾರೆ. ಬಿಜೆಪಿ ಕರ್ನಾಟಕದಲ್ಲಿ ಸಮಾಜದ ಎಲ್ಲಾ ವರ್ಗಗಳ ಪಕ್ಷವಾಗಿದೆ ಎಂದು ಅವರು ತಿಳಿಸಿದ್ದಾರೆ..
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕರ್ನಾಟಕದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದಾರೆ. ಅವರೊಬ್ಬ ಪ್ರಬಲ ನಾಯಕರು. ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುವ ಮೂಲಕ ಮುಂದಿನ ತಲೆಮಾರಿಗೆ ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.