ನವದೆಹಲಿ: ಕಡಲ ಭದ್ರತೆಯಿಲ್ಲದೆ ಸಮಗ್ರ ಆಂತರಿಕ ಮತ್ತು ಬಾಹ್ಯ ಭದ್ರತಾ ಚೌಕಟ್ಟನ್ನು ರಚಿಸಲು ಸಾಧ್ಯವಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶನಿವಾರ ಹೇಳಿದ್ದಾರೆ.
ನವದೆಹಲಿಯಲ್ಲಿ ಭಾರತೀಯ ಕೋಸ್ಟ್ ಗಾರ್ಡ್ನ ಸಮಾರಂಭದಲ್ಲಿ ಮಾತನಾಡಿದ ಸಿಂಗ್, ಕೋಸ್ಟ್ ಗಾರ್ಡ್ ಭಾರತದ ಕಡಲ ವಲಯಗಳನ್ನು ಸುರಕ್ಷಿತವಾಗಿ, ಭದ್ರವಾಗಿ ಮತ್ತು ಮಾಲಿನ್ಯ ಮುಕ್ತವಾಗಿರಿಸಿ, ಭದ್ರತಾ ಅಗತ್ಯಗಳನ್ನು ಮತ್ತು ಆರ್ಥಿಕ ಅಭಿವೃದ್ಧಿಯನ್ನು ಖಾತ್ರಿಪಡಿಸುತ್ತದೆ ಎಂದು ಹೇಳಿದರು.
ನಾಲ್ಕರಿಂದ ಆರು ದೋಣಿಗಳ ಮೂಲಕ ಆರಂಭವಾದ ಭಾರತೀಯ ಕೋಸ್ಟ್ ಗಾರ್ಡ್ ಈಗ 150 ಕ್ಕೂ ಹೆಚ್ಚು ಹಡಗುಗಳು ಮತ್ತು 66 ವಿಮಾನಗಳನ್ನು ಹೊಂದಿದೆ ಮತ್ತು ಇದು ವಿಶ್ವದ ಅತ್ಯುತ್ತಮ ಕಡಲ ಪಡೆಗಳಲ್ಲಿ ಪ್ರಮುಖ ಸ್ಥಾನವನ್ನು ಹೊಂದಿದೆ ಎಂದಿದ್ದಾರೆ.
ಇಂದು ಭಾರತವು ತ್ವರಿತ ಅಭಿವೃದ್ಧಿಯ ಹಾದಿಯಲ್ಲಿ ಮುನ್ನಡೆಯುತ್ತಿದೆ ಮತ್ತು ಅಡೆತಡೆಯಿಲ್ಲದ ಕಡಲ ಚಟುವಟಿಕೆ ಈ ಹಾದಿಯಲ್ಲಿರುವ ಪ್ರಮುಖ ಅಗತ್ಯಗಳಲ್ಲಿ ಒಂದಾಗಿದೆ ಎಂದಿದ್ದಾರೆ. ಕಡಲ ಶಕ್ತಿಯಾಗಿ ಭಾರತ ಹೊರಹೊಮ್ಮುತ್ತಿದ್ದು, ಭಾರತದ ಸಮೃದ್ಧಿಯು ಸಮುದ್ರದ ಮೇಲೆ ಅವಲಂಬಿತವಾಗಿದೆ ಎಂದು ಅಭಿಪ್ರಾಯಿಸಿದ್ದಾರೆ.
ಭಾರತ ಸರ್ಕಾರದ ದೃಷ್ಟಿಕೋನಕ್ಕೆ ಅನುಸಾರವಾಗಿ, ಭಾರತೀಯ ಕರಾವಳಿ ಕಾವಲು ಪಡೆ ಯಾವಾಗಲೂ ಪ್ರಾದೇಶಿಕ ಸಹಕಾರವನ್ನು ಉತ್ತೇಜಿಸಲು, ಹಿಂದೂ ಮಹಾಸಾಗರ ಪ್ರದೇಶದಲ್ಲಿ ಸಮುದ್ರ ಶಾಂತಿಯನ್ನು ಕಾಪಾಡಿಕೊಳ್ಳಲು ಮತ್ತು ಅಂತರಾಷ್ಟ್ರೀಯ ಕಡಲ ಏಜೆನ್ಸಿಗಳೊಂದಿಗೆ ನಿಕಟವಾಗಿ ಕೆಲಸ ಮಾಡಲು ಮುಂಚೂಣಿಯಲ್ಲಿದೆ ಎಂದು ರಕ್ಷಣಾ ಸಚಿವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.