ಲಕ್ನೋ: ಉತ್ತರಪ್ರದೇಶದಲ್ಲಿ ಅಖಿಲೇಶ್ ಸಿಂಗ್ ಯಾದವ್ ಅವರ ನೇತೃತ್ವದ ಸರಕಾರವಿದ್ದಾಗ 200ಕ್ಕೂ ಅಧಿಕ ಗಲಭೆಗಳು ನಡೆದಿವೆಯೆಂದು ಯುಪಿ ಸಚಿವ ಸಿದ್ದಾರ್ಥ್ ನಾಥ್ ಸಿಂಗ್ ಅವರು ಹೇಳಿದ್ದಾರೆ.
ಪತ್ರಕರ್ತನೊಬ್ಬನನ್ನು ಸಜೀವ ದಹನ ಮಾಡಿದ ಘಟನೆಯನ್ನು ಉಲ್ಲೇಖಿಸಿದ ಸಿಂಗ್, “2012-2016ರ ನಡುವೆ, ಅಖಿಲೇಶ್ ಯಾದವ್ ಸರ್ಕಾರದ ಅವಧಿಯಲ್ಲಿ 200 ಕ್ಕೂ ಹೆಚ್ಚು ಗಲಭೆಗಳು ನಡೆದಿವೆ. ಶಹಜಹಾನ್ಪುರದ ಪತ್ರಕರ್ತರೊಬ್ಬರು ಸರ್ಕಾರದ ವಿರುದ್ಧ ಮಾತನಾಡಿದ ನಂತರ ಅವರನ್ನು ಜೀವಂತವಾಗಿ ಸುಟ್ಟು ಹಾಕಲಾಯಿತು” ಎಂದು ಆರೋಪಿಸಿದ್ದಾರೆ.
ಕಳೆದ ಭಾನುವಾರ ಲಖಿಂಪುರ್ ಖೇರಿಯಲ್ಲಿ ನಡೆದ ಹಿಂಸಾತ್ಮಕ ಘಟನೆಗೆ ಸಂಬಂಧಿಸಿದಂತೆ ನ್ಯಾಯಯುತ ತನಿಖೆ ನಡೆಯುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.
“ಲಖಿಂಪುರ್ ಖೇರಿ ಘಟನೆ ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ಅಡಿಯಲ್ಲಿ ನ್ಯಾಯಯುತ ತನಿಖೆ ನಡೆಯುತ್ತಿದೆ ಮತ್ತು ಕೆಲವರನ್ನು ಬಂಧಿಸಲಾಗಿದೆ ಮತ್ತು ಕೆಲವರನ್ನು ವಿಚಾರಣೆಗೆ ಕರೆಯಲಾಗಿದೆ” ಎಂದು ಸಿಂಗ್ ಹೇಳಿದರು.
ಅಕ್ಟೋಬರ್ 3 ರಂದು ನಡೆದ ಲಖಿಂಪುರ್ ಖೇರಿ ಘಟನೆಯಲ್ಲಿ ನಾಲ್ಕು ಜನರು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.