ನವದೆಹಲಿ: ರಾಜಕೀಯ ಲಾಭ ನಷ್ಟಗಳ ಲೆಕ್ಕಾಚಾರಗಳ ನಡುವೆ ಮಾನವ ಹಕ್ಕುಗಳ ಉಲ್ಲಂಘನೆಯಾಗುವುದನ್ನು ನೋಡುವುದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಎಂದು ಮಾನವ ಹಕ್ಕುಗಳ ಬಗ್ಗೆ ತಮ್ಮದೇ ರೀತಿಯಾಗಿ ವ್ಯಾಖ್ಯಾನ ನೀಡುವವರ ಬಗ್ಗೆ ಪ್ರಧಾನಿ ಮೋದಿ ಕಿಡಿ ಕಾರಿದ್ದಾರೆ.
ಅವರು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ 28 ನೇ ಸಂಸ್ಥಾಪನಾ ದಿನದ ಹಿನ್ನೆಲೆಯಲ್ಲಿ ಮಾತನಾಡಿ, ಮಾನವ ಹಕ್ಕುಗಳನ್ನು ತಮ್ಮ ಹಿತಾಸಕ್ತಿಗಳಿಗೆ ಅನುಗುಣವಾಗಿ ನೋಡುವವರು ಅದನ್ನು ಬೇರೆಯೇ ರೀತಿಯಲ್ಲಿ ಅರ್ಥೈಸಿಕೊಳ್ಳುತ್ತಾರೆ. ಮಾನವ ಹಕ್ಕುಗಳ ಉಲ್ಲಂಘನೆ ಮೂಲಕ ಕೆಲ ಜನರು ದೇಶದ ಪ್ರತಿಷ್ಠೆಯನ್ನು ಕುಗ್ಗಿಸುವಂತೆ ಮಾಡುತ್ತಾರೆ. ಅಂತಹ ವ್ಯಕ್ತಿಗಳ ವಿರುದ್ಧ ಎಚ್ಚರಿಕೆಯಿಂದ ಇರಬೇಕು ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಬಡವರಿಗೆ ಶೌಚಾಲಯ, ಅಡುಗೆ ಅನಿಲ, ವಿದ್ಯುತ್, ವಸತಿ ಸೇರಿದಂತೆ ಎಲ್ಲಾ ಬಗೆಯ ಮೂಲಭೂತ ಅವಶ್ಯಕತೆಗಳನ್ನು ತಲುಪಿಸಲು ತೆಗೆದುಕೊಂಡ ಉಪಕ್ರಮಗಳ ಬಗ್ಗೆ ತಿಳಿಸಿದರು. ಇದು ದೇಶದ ಬಡವರಲ್ಲಿ ಉತ್ಸಾಹ ಮತ್ತು ಅವರ ಹಕ್ಕುಗಳ ಬಗೆಗಿನ ಅರಿವನ್ನು ಮೂಡಿಸುತ್ತದೆ ಎಂದು ಅವರು ಹೇಳಿದ್ದಾರೆ. ಹಾಗೆಯೇ ತ್ರಿವಳಿ ತಲಾಖ್ಗಳಂತಹ ಕೆಟ್ಟ ಪದ್ಧತಿಗಳನ್ನು ತೊಡೆದು ಹಾಕುವ ಮೂಲಕ ಸರ್ಕಾರ ಮಹಿಳೆಯರಿಗೆ ಹೊಸ ಹಕ್ಕನ್ನು ಕಲ್ಪಿಸಿಕೊಟ್ಟಿದೆ. ಮಹಿಳಾ ಸಬಲೀಕರಣ ದೃಷ್ಟಿಯಿಂದ ಮಹಿಳೆಯರಿಗೆ 26 ವಾರಗಳ ಹೆರಿಗೆ ರಜೆ, ಅತ್ಯಾಚಾರದಂತಹ ಸಂದರ್ಭದಲ್ಲಿ ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡುವ ಮೂಲಕ ಮಹಿಳಾ ಸಬಲೀಕರಣಕ್ಕೂ ಮುಂದಾಗಿದೆ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.