ನವದೆಹಲಿ: ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುವ ಅರ್ಚಕರಿಗೆ ಎ ಮತ್ತು ಬಿ ಅಧಿಸೂಚಿತ ಧಾರ್ಮಿಕ ಸಂಸ್ಥೆಗಳಲ್ಲಿ ಈಗಾಗಲೇ 5 ನೇ ವೇತನ ಶ್ರೇಣಿ ಸೌಲಭ್ಯ ಪಡೆದು ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ 6 ನೇ ವೇತನ ಶ್ರೇಣಿ ಸೌಲಭ್ಯವನ್ನು ದಿನಾಂಕ 01-10-2021 ರಿಂದ ಜಾರಿಗೆ ತರುವ ಮೂಲಕ, ಅವರ ಬಹುವರ್ಷಗಳ ಬೇಡಿಕೆ ಈಡೇರಿಸಲಾಗಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.
ಕೆಲ ಷರತ್ತುಗಳನ್ನು ಒಳಗೊಂಡು, ನೌಕರರ ವೇತನವನ್ನು ಆರನೇ ವೇತನ ಆಯೋಗದ ಅಡಿಗೆ ತರಲಾಗುವುದು ಎಂದ ಅವರು, ಇದಕ್ಕೆ ಸುಮಾರು 20 ಕೋಟಿ ರೂ. ವೆಚ್ಚವಾಗಲಿದ್ದು, ಆಯಾ ದೇಗುಲಗಳ ನಿಧಿಯಿಂದ ಒದಗಿಸಲಾಗುವುದು ಎಂದು ಅವರು ಹೇಳಿದ್ದಾರೆ. ಇದರಿಂದ ಸರ್ಕಾರಕ್ಕೆ ಹೊರೆಯಾಗುವುದಿಲ್ಲ ಎಂದು ತಿಳಿಸಿದ್ದಾರೆ.
ಅವರು ಮುಜರಾಯಿ ಇಲಾಖೆಯಲ್ಲಿ ಜಾರಿಗೊಳಿಸಲಾದ ಹೊಸ ಯೋಜನೆಗಳಿಗೆ ಸಂಬಂಧಿಸಿದಂತೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಾಲಯಗಳ ಅರ್ಚಕರು, ನೌಕರರ ಆರೋಗ್ಯ ಕಾಳಜಿಗಾಗಿ ವಿಮೆ ಯೋಜನೆ ಜಾರಿಗೊಳಿಸಲು ಚಿಂತಿಸಲಾಗಿದ್ದು, ಇದರಿಂದ ಇಲಾಖೆಯ 37 ಸಾವಿರ ಸಿಬ್ಬಂದಿಗೆ ಅನುಕೂಲ ಆಗಲಿದೆ ಎಂದು ಅವರು ತಿಳಿಸಿದ್ದಾರೆ.
ನಮ್ಮ ಇಲಾಖೆಯ ಎ ಮತ್ತು ಬಿ ಅಧಿಸೂಚಿತ ಧಾರ್ಮಿಕ ಸಂಸ್ಥೆಗಳಲ್ಲಿ ಈಗಾಗಲೇ 5ನೇ ವೇತನ ಶ್ರೇಣಿ ಸೌಲಭ್ಯ ಪಡೆದು ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ 6 ನೇ ವೇತನ ಶ್ರೇಣಿ ಸೌಲಭ್ಯವನ್ನು ದಿನಾಂಕ 01-10-2021 ರಿಂದ ಜಾರಿಗೆ ತರುವ ಮೂಲಕ, ಅವರ ಬಹುವರ್ಷಗಳ ಬೇಡಿಕೆ ಈಡೇರಿಸಲಾಗಿದೆ. pic.twitter.com/RYKEUmz9O7
— Shashikala Jolle (@ShashikalaJolle) October 12, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.