ಬೆಂಗಳೂರು: ಪೈರಸಿ ಸೇರಿದಂತೆ ಸ್ಯಾಂಡಲ್ವುಡ್ ನಲ್ಲಿ ಹಲವಾರು ಸಮಸ್ಯೆಗಳಿದ್ದು, ಈ ಬಗ್ಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಅವರೊಂದಿಗೆ ಚರ್ಚಿಸಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಿರ್ಧರಿಸಿದೆ.
ಈ ಬಗ್ಗೆ ಗೃಹಸಚಿವರನ್ನು ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಇಂದು ಭೇಟಿ ಮಾಡಿದ್ದು, ಉದ್ಯಮದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಅವಕಾಶ ಒದಗಿಸುವಂತೆ ಮನವಿ ಮಾಡಿದ್ದಾರೆ.
ಪೈರಸಿ ಸೇರಿದಂತೆ ಇನ್ನೂ ಹಲವು ತರಹದ ಸಮಸ್ಯೆಗಳನ್ನು ಕನ್ನಡ ಚಿತ್ರರಂಗ ಎದುರಿಸುತ್ತಿದೆ. ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಒದಗಿಸಿಕೊಳ್ಳುವ ನಿಟ್ಟಿನಲ್ಲಿ ವಾಣಿಜ್ಯ ಮಂಡಳಿಯು ಮನವಿಯಲ್ಲಿ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.