ಬೆಂಗಳೂರು: ರಾಜ್ಯ ಸರ್ಕಾರ ಕಳೆದೆರಡು ವರ್ಷಗಳಲ್ಲಿ ಪೊಲೀಸ್ ಇಲಾಖೆಗೆ 200 ಕೋಟಿ ರೂ. ಅನುದಾನ ನೀಡಿದ್ದು, ಸ್ವಾತಂತ್ರ್ಯ ದೊರೆತ ಬಳಿಕ ಇಷ್ಟು ಮೊತ್ತದಲ್ಲಿ ಅನುದಾನವನ್ನು ಯಾರ ಕಾಲದಲ್ಲಿಯೂ ನೀಡಿಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಅವರು ನಿನ್ನೆ ಮಂಡ್ಯದ ಡಿಎಆರ್ ಆವರಣದಲ್ಲಿ 36 ಪೊಲೀಸ್ ವಸತಿ ಗೃಹ, ಡಿಎಆರ್ ಆಡಳಿತ ಕಚೇರಿ, ಶ್ವಾನದಳ, ಸೆಂಟ್ರಲ್ ಪೊಲೀಸ್ ಠಾಣೆ ಕಟ್ಟಡಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.
ಪ್ರಸಕ್ತ ವರ್ಷದಲ್ಲಿ 100 ಪೊಲೀಸ್ ಠಾಣೆಗಳನ್ನು ನಿರ್ಮಾಣ ಮಾಡಲಾಗಿದೆ. ಈ ವರೆಗೆ ರಾಜ್ಯದಲ್ಲಿ ವರ್ಷಕ್ಕೆ ಕೇವಲ 4 – 5 ಠಾಣೆಗಳಷ್ಟೇ ನಿರ್ಮಾಣವಾಗುತ್ತಿದ್ದವು ಎಂದು ಅವರು ಹೇಳಿದ್ದಾರೆ. ಪೊಲೀಸ್ ವಸತಿ ಗೃಹದ ಸಮಸ್ಯೆ ತೀವ್ರವಾಗಿರುವುದನ್ನು ಮನಗಂಡ ಸರ್ಕಾರ ಈಗಾಗಲೇ 11 ಸಾವಿರ ವಸತಿ ಗೃಹಗಳನ್ನು ನಿರ್ಮಾಣ ಮಾಡಿ ಹಸ್ತಾಂತರ ಮಾಡಿರುವುದಾಗಿಯೂ ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.