ಬೆಂಗಳೂರು: ನಾಡಿನೆಲ್ಲೆಡೆ ಸಂಭ್ರಮದ ದಸರಾ ಹಬ್ಬದ ಆಚರಣೆ ನಡೆಯುತ್ತಿದ್ದು, ಜನರು ಸಡಗರದಿಂದ ನವರಾತ್ರಿ ಹಬ್ಬದ ಆಚರಣೆ ನಡೆಸುತ್ತಿದ್ದಾರೆ.
ದಸರಾ ಎಂದರೆ ಮೈಸೂರಿನ ಚಿತ್ರಣವೇ ಎಲ್ಲರ ಮುಂದೆ ಬರುತ್ತಿದ್ದು, ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ದಸರಾ ಗೊಂಬೆ ಪ್ರದರ್ಶನವನ್ನು ಆಯೋಜಿಸಲಾಗಿದೆ. ಮೈಸೂರಿನ ವಿಶ್ವವಿಖ್ಯಾತ ದಸರಾ ಹಬ್ಬವನ್ನು ಪ್ರತಿನಿಧಿಸುವ ಬೊಂಬೆಗಳನ್ನು ರೈಲ್ವೆ ನಿಲ್ದಾಣದಲ್ಲಿ ಜೋಡಿಸಲಾಗಿದೆ. ಈ ಬೊಂಬೆಗಳ ಪ್ರದರ್ಶನ ನೋಡುಗರ ಕಣ್ಮನ ಸೆಳೆಯುವಂತಿದೆ.
Interesting:
KSR Bengaluru Railway Station is ready to welcome passengers with the beautiful Mysore #Dussehra display at the Concourse of the station. pic.twitter.com/VTCqYnCr5r
— Ministry of Railways (@RailMinIndia) October 13, 2021
ಹಾಗೆಯೇ ರೈಲ್ವೆ ನಿಲ್ದಾಣದಲ್ಲಿ ನೂತನವಾಗಿ ನಿರ್ಮಾಣ ಮಾಡಲಾಗಿರುವ ಅಕ್ವೇರಿಯಂ, ರೈಲ್ವೆ ಮ್ಯೂಸಿಯಂಗಳನ್ನು ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ವೀಕ್ಷಿಸಿದರು. ಈ ಸಂದರ್ಭದಲ್ಲಿ ರೈಲ್ವೆ ಅಧಿಕಾರಿಗಳು ಉಪಸ್ಥಿತರಿದ್ದರು.
ದಸರಾ ಮಹೋತ್ಸವ ನಾಡಿನೆಲ್ಲೆಡೆ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಇಂದು ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದಲ್ಲಿ ಆಯೋಜಿಸಿರುವ ದಸರಾ ಗೊಂಬೆ ಪ್ರದರ್ಶನವನ್ನು ವೀಕ್ಷಿಸಲಾಯಿತು. ನಂತರ ಇಲ್ಲಿನ ವಿನೂತನ ಅಕ್ವೇರಿಯಂ ಹಾಗೂ ರೈಲ್ವೆ ಮ್ಯೂಸಿಯಂ ವೀಕ್ಷಿಸಲಾಯಿತು. ರೈಲ್ವೆ ಅಧಿಕಾರಿಗಳು ಭಾಗವಹಿಸಿದ್ದರು#Navaratri2021 pic.twitter.com/wYg6vTPKXA
— Araga Jnanendra (@JnanendraAraga) October 13, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.