ನವದೆಹಲಿ: ಸರ್ಕಾರದ ವಿವಿಧ ಕಲ್ಯಾಣ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಲು ಅಗತ್ಯವಾದ ಅಸಂಘಟಿತ ಕಾರ್ಮಿಕರ ಸಮಗ್ರ ಡೇಟಾಬೇಸ್ ಅನ್ನು ಸೃಷ್ಟಿಸುವ ಸಲುವಾಗಿ ರಚಿಸಲಾದ ಇ-ಶ್ರಮ್ ಪೋರ್ಟಲ್ನಲ್ಲಿ ಇದುವರೆಗೆ ನಾಲ್ಕು ಕೋಟಿಗೂ ಹೆಚ್ಚು ಕಾರ್ಮಿಕರು ನೋಂದಾಯಿಸಿಕೊಂಡಿದ್ದಾರೆ.
ಈ ಮಾಹಿತಿಯನ್ನು ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವ ಭೂಪೇಂದರ್ ಯಾದವ್ ಅವರು ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ.
ಇ-ಪೋರ್ಟಲ್ನಲ್ಲಿ ನೋಂದಾಯಿಸುವ ಮೂಲಕ ಅಸಂಘಟಿತ ಕಾರ್ಮಿಕರಿಗೆ ಸರ್ಕಾರದ ಯೋಜನೆಗಳ ಲಾಭವನ್ನು ಸುಲಭವಾಗಿ ಪಡೆಯಲು ಸಾಧ್ಯವಾಗಲಿದೆ ಎಂದು ಅವರು ಹೇಳಿದ್ದಾರೆ.
श्रम एवं रोजगार मंत्रालय द्वारा शुरू ई-श्रम पोर्टल पर असंगठित क्षेत्र के श्रमिकों का लगातार पंजीकरण हो रहा है। दो माह से भी कम समय में 4 करोड़ से अधिक असंगठित कामगार पंजीकरण कर चुके हैं। इस पोर्टल पर पंजीकरण कराने से असंगठित श्रमिकों को सरकार की योजनाओं का लाभ सरलता से मिल सकेगा। pic.twitter.com/Vmq70cs8Rj
— Bhupender Yadav (@byadavbjp) October 17, 2021
ಇ-ಶ್ರಮ ಪೋರ್ಟಲ್ ನಿರ್ಮಾಣ, ಉಡುಪು ತಯಾರಿಕೆ, ಮೀನುಗಾರಿಕೆ, ಗಿಗ್ ಮತ್ತು ಪ್ಲಾಟ್ಫಾರ್ಮ್ ಕೆಲಸ, ಬೀದಿ ವ್ಯಾಪಾರ, ಮನೆ ಕೆಲಸ, ಕೃಷಿ ಮತ್ತು ಸಂಬಂಧಿತ ಮತ್ತು ಸಾರಿಗೆ ವಲಯದಂತಹ ವಿವಿಧ ವಲಯಗಳ ಕಾರ್ಮಿಕರ ಡೇಟಾಬೇಸ್ ಅನ್ನು ಸೃಷ್ಟಿಸುತ್ತಿದೆ. ಅಗಾಧ ಪ್ರಮಾಣದ ವಲಸೆ ಕಾರ್ಮಿಕರು ಈ ವಲಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.
ವಲಸೆ ಕಾರ್ಮಿಕರು ಸೇರಿದಂತೆ ಎಲ್ಲಾ ಅಸಂಘಟಿತ ಕಾರ್ಮಿಕರು ಈಗ ವಿವಿಧ ಸಾಮಾಜಿಕ ಭದ್ರತೆ ಮತ್ತು ಉದ್ಯೋಗ ಆಧಾರಿತ ಯೋಜನೆಗಳ ಲಾಭಗಳನ್ನು ಪಡೆಯಲು ತಮ್ಮನ್ನು ಇ-ಶ್ರಮ್ ಪೋರ್ಟಲ್ನಲ್ಲಿ ನೋಂದಣಿ ಮಾಡಿಕೊಳ್ಳಬಹುದು.
ಪೋರ್ಟಲ್ನಲ್ಲಿ ನೋಂದಾಯಿಸಲಾದ 4.09 ಕೋಟಿ ಕಾರ್ಮಿಕರಲ್ಲಿ ಸುಮಾರು 50.02% ಫಲಾನುಭವಿಗಳು ಮಹಿಳೆಯರು ಮತ್ತು 49.98% ಪುರುಷರು.
ಇತ್ತೀಚಿನ ದತ್ತಾಂಶಗಳ ಪ್ರಕಾರ, ಒಡಿಶಾ, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ಬಿಹಾರ ಮತ್ತು ಮಧ್ಯಪ್ರದೇಶ ರಾಜ್ಯಗಳು ಈ ಉಪಕ್ರಮದ ಮುಂಚೂಣಿಯಲ್ಲಿದ್ದು, ಹೆಚ್ಚಿನ ಸಂಖ್ಯೆಯ ನೋಂದಣಿಗಳನ್ನು ಹೊಂದಿವೆ.
2019-20ರ ಆರ್ಥಿಕ ಸಮೀಕ್ಷೆಯ ಪ್ರಕಾರ, ದೇಶದಲ್ಲಿ ಅಂದಾಜು 38 ಕೋಟಿ ಅಸಂಘಟಿತ ಕಾರ್ಮಿಕರು ಇದ್ದಾರೆ, ಇವರನ್ನು ಪೋರ್ಟಲ್ನಲ್ಲಿ ನೋಂದಾಯಿಸುವ ಗುರಿ ಹೊಂದಲಾಗಿದೆ. ಈ ವಲಸೆ ಕಾರ್ಮಿಕರು ಈಗ ಇ-ಶ್ರಮ್ ಪೋರ್ಟಲ್ನಲ್ಲಿ ನೋಂದಣಿಯಾಗುವ ಮೂಲಕ ವಿವಿಧ ಸಾಮಾಜಿಕ ಭದ್ರತೆ ಮತ್ತು ಉದ್ಯೋಗ ಆಧಾರಿತ ಯೋಜನೆಗಳ ಪ್ರಯೋಜನಗಳನ್ನು ಪಡೆಯಬಹುದು.
ಇ-ಶ್ರಮ್ ಪೋರ್ಟಲ್ನಲ್ಲಿ ನೋಂದಾಯಿಸಿದ ನಂತರ, ಅಸಂಘಟಿತ ಕೆಲಸಗಾರರು ಡಿಜಿಟಲ್ ಇ-ಶ್ರಮ್ ಕಾರ್ಡ್ ಅನ್ನು ಸ್ವೀಕರಿಸುತ್ತಾರೆ. ಅವರು ಸಾಮಾಜಿಕ ಭದ್ರತೆ ಪ್ರಯೋಜನಗಳನ್ನು ಪಡೆಯಲು ದೇಶಾದ್ಯಂತ ಸ್ವೀಕಾರಾರ್ಹವಾದ ಯೂನಿವರ್ಸಲ್ ಅಕೌಂಟ್ ಸಂಖ್ಯೆಯನ್ನು (eSHRAM ಕಾರ್ಡ್ನಲ್ಲಿ) ಪಡೆಯುತ್ತಾರೆ. ಕಾರ್ಮಿಕ ಇ-ಶ್ರಮ್ ಪೋರ್ಟಲ್ನಲ್ಲಿ ನೋಂದಾಯಿಸಿಕೊಂಡವರು ಅಪಘಾತಕ್ಕೊಳಗಾಗಿ ಸಾವು ಅಥವಾ ಶಾಶ್ವತ ಅಂಗವೈಕಲ್ಯಕ್ಕೆ ಒಳಗಾದರೆ 2 ಲಕ್ಷ ರೂಪಾಯಿ ಮತ್ತು ಭಾಗಶಃ ಅಂಗವೈಕಲ್ಯಕ್ಕೆ 1 ಲಕ್ಷ ರೂಪಾಯಿ ಪಡೆಯಲು ಅರ್ಹರಾಗಿರುತ್ತಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.