ನವದೆಹಲಿ: ಭಾರತವು ತನ್ನ ಅಸ್ತಿತ್ವದಲ್ಲಿರುವ ನೀತಿಗಳನ್ನು ಪರಿಷ್ಕರಿಸುತ್ತಿದೆ ಮತ್ತು ಬಾಹ್ಯಾಕಾಶ ಕ್ಷೇತ್ರದಲ್ಲಿ ಉದ್ಯಮಗಳ ಭಾಗವಹಿಸುವಿಕೆಯನ್ನು ಹೆಚ್ಚಿಸಲು ಹೊಸದನ್ನು ತರುವ ಪ್ರಕ್ರಿಯೆಯಲ್ಲಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಧ್ಯಕ್ಷ ಡಾ ಕೆ ಶಿವನ್ ಹೇಳಿದ್ದಾರೆ.
ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿಯಾಗಿರುವ ಶಿವನ್, ಎಕ್ಸ್ಪೋ 2020 ದುಬೈನ ಇಂಡಿಯಾ ಪೆವಿಲಿಯನ್ನ ‘ಬಾಹ್ಯಾಕಾಶ-ಅಂತರರಾಷ್ಟ್ರೀಯ ಭಾಗವಹಿಸುವಿಕೆಗಳು ಮತ್ತು ಸಹಯೋಗಗಳ ಭವಿಷ್ಯ’ ಕುರಿತು ಉದ್ಘಾಟನಾ ಅಧಿವೇಶನದಲ್ಲಿ ವೀಡಿಯೊ ಸಂದೇಶದಲ್ಲಿ ಈ ಹೇಳಿಕೆ ನೀಡಿದ್ದಾರೆ.
ಈ ವಲಯದಲ್ಲಿನ ಇತ್ತೀಚಿನ ಸುಧಾರಣೆಗಳು ಈ ಪ್ರಕ್ರಿಯೆಯಲ್ಲಿ ಪೂರೈಕೆದಾರರಿಂದ ಪಾಲುದಾರರಾಗಿ ಖಾಸಗಿ ವಲಯದ ಪಾತ್ರವು ವಿಕಸನಗೊಂಡಿರುವುದನ್ನು ಖಾತ್ರಿಪಡಿಸಿದೆ ಎಂದು ಅವರು ಒತ್ತಿ ಹೇಳಿದರು.
ಅಂತಾರಾಷ್ಟ್ರೀಯ ಸಹಕಾರಕ್ಕಾಗಿ ಭಾರತವು ನೋಡುತ್ತಿರುವ ಮಹತ್ವದ ಕ್ಷೇತ್ರಗಳಲ್ಲಿ ಬಾಹ್ಯಾಕಾಶವೂ ಒಂದು ಎಂದು ಅವರು ಹೇಳಿದ್ದಾರೆ.
“ವಾಣಿಜ್ಯ ಮತ್ತು ತಾಂತ್ರಿಕ ಸಹಯೋಗದೊಂದಿಗೆ ಬಾಹ್ಯಾಕಾಶ ಸಹಕಾರವು ಮತ್ತಷ್ಟು ಬಲಗೊಳ್ಳುತ್ತದೆ ಎಂದು ನಾನು ಭಾವಿಸುತ್ತೇನೆ. ಜಾಗತಿಕ ಮಟ್ಟದಲ್ಲಿ ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತೀಯ ಉದ್ಯಮವು ದೊಡ್ಡ ಪಾತ್ರವನ್ನು ವಹಿಸಬೇಕಿದೆ” ಎಂದು ಶಿವನ್ ಹೇಳಿದ್ದಾರೆ.
ಜಾಗತಿಕ ಮಾರುಕಟ್ಟೆಯಲ್ಲಿ ಬಾಹ್ಯಾಕಾಶ ಕ್ಷೇತ್ರವನ್ನು ಹೆಚ್ಚಿಸಲು ಭಾರತ ಯೋಜಿಸುತ್ತಿದೆ. ಭವಿಷ್ಯದಲ್ಲಿ ದೇಶವನ್ನು ಆರ್ಥಿಕ ಬಾಹ್ಯಾಕಾಶ ಕೇಂದ್ರವನ್ನಾಗಿಸುವ ಗುರಿಯೊಂದಿಗೆ ಇತ್ತೀಚೆಗೆ ಭಾರತೀಯ ಬಾಹ್ಯಾಕಾಶ ಸಂಘ (ISpA) ಎಂಬ ಹೊಸ ಉದ್ಯಮ ಸಂಸ್ಥೆಯನ್ನು ಆರಂಭಿಸಲಾಗಿದೆ.
ಬಾಹ್ಯಾಕಾಶ ವಲಯದಲ್ಲಿ ಖಾಸಗಿಯವರನ್ನು ಆಹ್ವಾನಿಸಲು ಸರ್ಕಾರವು ಮುಕ್ತವಾಗಿದೆ ಮತ್ತು ಇಸ್ರೋ ಸ್ಟಾರ್ಟ್ ಅಪ್ ಮತ್ತು ಕೈಗಾರಿಕೆಗಳೊಂದಿಗೆ ಕೈಜೋಡಿಸುತ್ತಿದೆ ಎಂದು ಶಿವನ್ ಹೇಳಿದರು.
“ದ್ವಿಪಕ್ಷೀಯ ಮತ್ತು ಬಹುಪಕ್ಷೀಯ ಪಾಲುದಾರಿಕೆ ಸೇರಿದಂತೆ ಅಂತಾರಾಷ್ಟ್ರೀಯ ಸಹಯೋಗದ ಮೇಲೆ ಭಾರತ ಗಮನ ಹರಿಸುತ್ತಿದೆ” ಎಂದು ಅವರು ಹೇಳಿದ್ದಾರೆ.
ಇತ್ತೀಚಿನ ದಿನಗಳಲ್ಲಿ, ಇಸ್ರೋ ಕೂಡ ನೀತಿ ಆಯೋಗ ಮತ್ತು ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರವನ್ನು ಉತ್ತೇಜಿಸುವ ಇಲಾಖೆ (ಡಿಪಿಐಐಟಿ) ಯೊಂದಿಗೆ ಕೈಜೋಡಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.