ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪೂಂಚ್-ರಜೌರಿ ವಲಯಗಳಲ್ಲಿ ಇತ್ತೀಚೆಗೆ ನಡೆದ ನಾಗರಿಕರ ಹತ್ಯೆ ಮತ್ತು ಕಣಿವೆಯಲ್ಲಿ ತೀವ್ರಗೊಂಡ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳ ಹಿನ್ನೆಲೆಯಲ್ಲಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾನೆ ಅವರು ಭದ್ರತಾ ಪರಿಸ್ಥಿತಿ ಮತ್ತು ಕಾರ್ಯಾಚರಣೆಯ ಸಿದ್ಧತೆಯನ್ನು ಪರಿಶೀಲಿಸಲು ಕಣಿವೆಗೆ ಆಗಮಿಸಲಿದ್ದಾರೆ.
ಭಾರತೀಯ ಸೇನೆಯು ನೀಡಿರುವ ಹೇಳಿಕೆಯ ಪ್ರಕಾರ, ಜನರಲ್ ನರವಾನೆ ಅವರು ಜಮ್ಮು ಪ್ರದೇಶಕ್ಕೆ ಆಗಮಿಸಲಿದ್ದು, ಅವರಿಗೆ ಅಲ್ಲಿ ವೈಟ್ ನೈಟ್ ಕಾರ್ಪ್ಸ್ನ ಜನರಲ್ ಆಫೀಸರ್ ಕಮಾಂಡಿಂಗ್ (ಜಿಒಸಿ) ಭದ್ರತಾ ಪರಿಸ್ಥಿತಿಯ ಬಗ್ಗೆ ಅಪ್ಡೇಟ್ ನೀಡುತ್ತಾರೆ.
ಭಾರತೀಯ ಸೇನೆಯು ಈ ಬಗ್ಗೆ ಟ್ವಿಟ್ ಮಾಡಿದ್ದು, “ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾನೆ ಅವರು ಜಮ್ಮು ಪ್ರದೇಶಕ್ಕೆ ಎರಡು ದಿನಗಳ ಭೇಟಿ ನೀಡಲಿದ್ದಾರೆ, ಇಲ್ಲಿ ಅವರಿಗೆ ಜಿಒಸಿ ವೈಟ್ ನೈಟ್ ಕಾರ್ಪ್ಸ್ ಭದ್ರತಾ ಪರಿಸ್ಥಿತಿ ಮತ್ತು ಕಾರ್ಯಾಚರಣೆಯ ಸಿದ್ಧತೆಯ ಕುರಿತು ಅಪ್ಡೇಟ್ ನೀಡುತ್ತದೆ” ಎಂದಿದ್ದಾರೆ.
“ಸೇನಾ ಮುಖ್ಯಸ್ಥರು ಫಾರ್ವರ್ಡ್ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ ಮತ್ತು ತಳಮಟ್ಟದಲ್ಲಿನ ಸೇನಾ ಸಿಬ್ಬಂದಿ ಮತ್ತು ಕಮಾಂಡರ್ಗಳೊಂದಿಗೆ ಸಂವಹನ ನಡೆಸಲಿದ್ದಾರೆ” ಎಂದು ಹೇಳಿದೆ.
General MM Naravane #COAS is on a two day visit to Jammu Region wherein GOC White Knight Corps will give an update on security situation and operational preparedness. #COAS will visit forward areas and interact with troops and commanders on ground. pic.twitter.com/duufoKOCUT
— ADG PI – INDIAN ARMY (@adgpi) October 18, 2021
ಇತ್ತೀಚಿನ ದಿನಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ನಾಗರಿಕರ ಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ. ಭಯೋತ್ಪಾದಕರು ಹಿಂದೂಗಳನ್ನು ಗುರಿಯಾಗಿಸಿ ಈ ಹತ್ಯೆಗಳನ್ನು ನಡೆಸುತ್ತಿದ್ದಾರೆ. ಸೇನೆ ಬಗ್ಗೆ ಗಂಭೀರ ಕ್ರಮವನ್ನು ಅನುಸರಿಸಲು ನಿರ್ಧರಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.