ಬೆಂಗಳೂರು: ಉತ್ತರಾಖಂಡ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಪ್ರವಾಹ ಭೀತಿ ತಲೆದೋರಿದೆ. ಈ ಹಿನ್ನೆಲೆಯಲ್ಲಿ ಅಲ್ಲಿನ ಕನ್ನಡಿಗರ ನೆರವಿಗೆ ಕರ್ನಾಟಕ ಸರ್ಕಾರ ಸಹಾಯವಾಣಿ ಆರಂಭಿಸಿದೆ.
ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ರಾಜ್ಯ ಸರ್ಕಾರ, ಉತ್ತರಾಖಂಡ್ನ ಪ್ರವಾಹದಲ್ಲಿ ಜನರು, ಪ್ರಯಾಣಿಕರು, ಯಾತ್ರಿಕರು, ಪ್ರವಾಸಿಗರು, ಸಂದರ್ಶಕರು, ಸ್ನೇಹಿತರು, ಸಂಬಂಧಿಗಳು ಸಿಲುಕಿಕೊಂಡಿದ್ದಲ್ಲಿ ಈ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ತಿಳಿಸಿದೆ.
ಈ ಮಾಹಿತಿಯನ್ನು ಅಲ್ಲಿನ ಅಧಿಕಾರಿಗಳಿಗೆ ರವಾನಿಸಿ, ಕಾರ್ಯಾಚರಣೆಗೆ ಅನುಕೂಲ ಮಾಡಿಕೊಡಲಾಗುತ್ತದೆ. ತಕ್ಷಣವೇ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸರ್ಕಾರ ಹೇಳಿದೆ. 080 – 1070 ಮತ್ತು 080 – 2234 0676 ಗೆ ಕರೆ ಮಾಡಿ ಮಾಹಿತಿ ನೀಡಬಹುದು ಇದು ಎಲ್ಲಾ ಸಮಯದಲ್ಲೂ ಸೇವೆ ನೀಡುತ್ತದೆ ಎಂದು ಸರ್ಕಾರ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.