ಕಲ್ಬುರ್ಗಿ: ಪ್ರಸ್ತುತ ಬೆಂಗಳೂರಿನಲ್ಲಿ ಡಿಪಿಎಆರ್ನೊಂದಿಗೆ ಕಾರ್ಯ ನಿರ್ವಹಿಸುತ್ತಿದ್ದ ಆರ್ಟಿಕಲ್ 371 ಜೆ ಅನುಷ್ಠಾನ ಕೋಶ ಶೀಘ್ರ ಕಲ್ಬುರ್ಗಿಗೆ ಸ್ಥಳಾಂತರವಾಗಲಿದೆ. ಈ ಸಂಬಂಧ ಸರ್ಕಾರ ಆದೇಶ ಹೊರಡಿಸಿರುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಹಿಂದೆ ಸದನದಲ್ಲಿ ನೀಡಿದ ಭರವಸೆಯಂತೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಪೂರ್ಣ ಪ್ರಮಾಣದ ಕಾರ್ಯದರ್ಶಿ ನೇಮಕ ಮಾಡಲಾಗಿದೆ. ಈ ಭಾಗದ ಜನರ ಬೇಡಿಕೆಯಾದ 371 (ಜೆ) ಕೋಶ ಸ್ಥಳಾಂತರ ಸಹ ಶೀಘ್ರದಲ್ಲೇ ಆಗಲಿದೆ. ಈ ಭಾಗದಲ್ಲಿ ಇರುವ ಖಾಲಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಉಪಚುನಾವಣೆ ಬಳಿಕ ನಿರ್ಧಾರ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ.
ಕೆಕೆಆರ್ಡಿಬಿಗೆ ಪ್ರಸ್ತುತ ನೀಡಲಾಗುತ್ತಿರುವ 1500 ಕೋಟಿ ರೂ. ಗಳ ಜೊತೆಗೆ ಹೆಚ್ಚುವರಿ 1500 ಕೋಟಿ ರೂ. ಒದಗಿಸಲು ಸರ್ಕಾರ ಉತ್ಸುಕವಾಗಿದೆ. ಈ ಹೆಚ್ಚುವರಿ ಅನುದಾನಕ್ಕೆ ಸಮಗ್ರ ಯೋಜನ ವರದಿ ರೂಪಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.