ನವದೆಹಲಿ: ಇಂದು ವಾಲ್ಮೀಕಿ ಜಯಂತಿಯನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಹರ್ಷಿ ವಾಲ್ಮೀಕಿಗೆ ಗೌರವ ಸಲ್ಲಿಸಿದರು ಮತ್ತು ನಮ್ಮ ಶ್ರೀಮಂತ ಗತವೈಭವ ಮತ್ತು ಭವ್ಯ ಸಂಸ್ಕೃತಿಯನ್ನು ವಿವರಿಸುವಲ್ಲಿ ಅವರ ಪ್ರಮುಖ ಕೊಡುಗೆಗಳನ್ನು ಸ್ಮರಿಸಿದರು.
“ವಾಲ್ಮೀಕಿ ಜಯಂತಿಯ ವಿಶೇಷ ಸಂದರ್ಭದಲ್ಲಿ ನಾನು ಮಹರ್ಷಿ ವಾಲ್ಮೀಕಿಗೆ ಗೌರವಪೂರ್ವಕವಾಗಿ ತಲೆಬಾಗುತ್ತೇನೆ. ನಮ್ಮ ಶ್ರೀಮಂತ ಭೂತಕಾಲ ಮತ್ತು ವೈಭವದ ಸಂಸ್ಕೃತಿಯನ್ನು ವಿವರಿಸುವಲ್ಲಿ ಅವರ ಪ್ರಮುಖ ಕೊಡುಗೆಗಳನ್ನು ನಾವು ಸ್ಮರಿಸುತ್ತೇವೆ. ಸಾಮಾಜಿಕ ಸಬಲೀಕರಣಕ್ಕೆ ಅವರು ನೀಡಿದ ಒತ್ತು ನಮಗೆ ಸ್ಫೂರ್ತಿ ನೀಡುತ್ತದೆ” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
I bow in reverence to Maharishi Valmiki on the special occasion of Valmiki Jayanti. We recall his seminal contributions towards chronicling our rich past and glorious culture. His emphasis on social empowerment keeps inspiring us. pic.twitter.com/Q9NMTEkzwt
— Narendra Modi (@narendramodi) October 20, 2021
ಪ್ರಧಾನಮಂತ್ರಿ ತಮ್ಮ ಮನ್ ಕಿ ಬಾತ್ ಆಡಿಯೋ ಕ್ಲಿಪ್ ಅನ್ನು ಹಂಚಿಕೊಂಡಿದ್ದು, ಕಳೆದ ವರ್ಷ ವಾಲ್ಮೀಕಿ ಜಯಂತಿಗೆ ಕೆಲವು ದಿನಗಳ ಮೊದಲು ಇದನ್ನು ಪ್ರಸಾರ ಮಾಡಲಾಗಿತ್ತು. ಅದರಲ್ಲಿ ಅವರು ಮಹರ್ಷಿ ವಾಲ್ಮೀಕಿ ಬಗ್ಗೆ ಮಾತನಾಡಿದ್ದಾರೆ.
ಕಳೆದ ವರ್ಷ ಅಕ್ಟೋಬರ್ 25 ರಂದು ನಡೆದ ‘ಮನ್ ಕೀ ಬಾತ್ 2.0’ ಕಾರ್ಯಕ್ರಮದ 17 ನೇ ಸಂಚಿಕೆಯಲ್ಲಿ ಮೋದಿ, “ಮಹರ್ಷಿ ವಾಲ್ಮೀಕಿಯವರ ಉನ್ನತ ಆದರ್ಶಗಳು ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡುತ್ತಲೇ ಇರುತ್ತವೆ ಮತ್ತು ಲಕ್ಷಾಂತರ ಜನರಿಗೆ ಅವರು ಭರವಸೆಯ ದಾರಿದೀಪವಾಗಿದ್ದಾರೆ. ಬಡವರು ಮತ್ತು ದಲಿತರು ಅವರಲ್ಲಿ ಭರವಸೆ ಮತ್ತು ನಂಬಿಕೆಯನ್ನು ಇಟ್ಟಿದ್ದಾರೆ. ಇಚ್ಛಾಶಕ್ತಿಯನ್ನು ಹೊಂದಿದ್ದರೆ ಯಾರು ಬೇಕಾದರೂ ಸುಲಭವಾಗಿ ಸಾಧಿಸಬಹುದು ಎಂದು ಅವರು ಹೇಳುತ್ತಾರೆ. ಈ ಇಚ್ಛಾಶಕ್ತಿಯೇ ಅನೇಕ ಯುವಕರಿಗೆ ಅಸಾಮಾನ್ಯ ಕೆಲಸಗಳನ್ನು ಮಾಡಲು ಶಕ್ತಿಯನ್ನು ನೀಡುತ್ತದೆ” ಎಂದಿದ್ದಾರೆ.
“ಮಹರ್ಷಿ ವಾಲ್ಮೀಕಿ ಧನಾತ್ಮಕ ಚಿಂತನೆಗೆ ಒತ್ತು ನೀಡಿದರು. ಅವರಿಗೆ ಸೇವಾ ಮನೋಭಾವ ಮತ್ತು ಮಾನವ ಘನತೆ ಅತ್ಯಂತ ಮಹತ್ವದ್ದಾಗಿತ್ತು. ಮಹರ್ಷಿ ವಾಲ್ಮೀಕಿಯ ನಡವಳಿಕೆ, ಆಲೋಚನೆಗಳು ಮತ್ತು ಆದರ್ಶಗಳು ನವ ಭಾರತಕ್ಕಾಗಿ ನಮ್ಮ ಸಂಕಲ್ಪಕ್ಕೆ ಸ್ಫೂರ್ತಿ ಮತ್ತು ಮಾರ್ಗದರ್ಶಕ ಶಕ್ತಿ. ನಾವು ಯಾವಾಗಲೂ ಮಹರ್ಷಿಗೆ ಕೃತಜ್ಞರಾಗಿರುತ್ತೇವೆ. ಭವಿಷ್ಯದ ಪೀಳಿಗೆಗೆ ಮಾರ್ಗದರ್ಶನ ನೀಡಲು ವಾಲ್ಮೀಕಿ ರಾಮಾಯಣದಂತಹ ಮಹಾಕಾವ್ಯವನ್ನು ರಚಿಸಿದ್ದಾರೆ “ಎಂದು ಅವರು ಹೇಳಿದ್ದರು.
ಮಹರ್ಷಿ ವಾಲ್ಮೀಕಿಯವರ ಜನ್ಮ ದಿನಾಚರಣೆಯನ್ನು ಪ್ರತಿವರ್ಷ ಅಶ್ವಿನಿ ತಿಂಗಳ ಹುಣ್ಣಿಮೆಯ ದಿನದಂದು ಆಚರಿಸಲಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.