ನವದೆಹಲಿ: ಬೌದ್ಧ ಯಾತ್ರೆಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಪ್ರಧಾನಿ ಮೋದಿಯವರು ಉತ್ತರಪ್ರದೇಶದಲ್ಲಿ ಇಂದು ಕುಶಿನಗರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದರು.
ವಿಮಾನ ನಿಲ್ದಾಣವು ಬೌದ್ಧ ಸರ್ಕ್ಯೂಟ್ನಲ್ಲಿ ಪ್ರವಾಸೋದ್ಯಮವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ, ಪುರಾತನ ನಗರವಾದ ಕುಶಿನಗರವು ಗೌತಮ ಬುದ್ಧನ ಅಂತಿಮ ವಿಶ್ರಾಂತಿಯ ಸ್ಥಳವಾಗಿದೆ. ಅಲ್ಲಿ ಮರಣದ ನಂತರ ಬುದ್ಧ ಮಹಾಪರಿನಿರ್ವಾಣವನ್ನು ಪಡೆದನು ಎಂದು ಹೇಳಲಾಗಿದೆ.
“ಕುಶಿನಗರ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ದಶಕಗಳ ಆಕಾಂಕ್ಷೆ ಮತ್ತು ಪ್ರಯತ್ನದ ಫಲಿತಾಂಶವಾಗಿದೆ. ನನ್ನ ಸಂತೋಷವು ಇಂದು ಎರಡು ಪಟ್ಟು ಹೆಚ್ಚಾಗಿದೆ. ಇದು ಪೂರ್ವಾಂಚಲ ಜನರ ಮೇಲಿನ ಬದ್ಧತೆಯನ್ನು ಪೂರೈಸುವ ಕ್ಷಣ” ಎಂದು ಕುಶಿನಗರ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದ ನಂತರ ಪ್ರಧಾನಿ ಮೋದಿ ಹೇಳಿದರು.
भगवान बुद्ध से जुड़े स्थानों को विकसित करने के लिए, बेहतर कनेक्टिविटी के लिए, श्रद्धालुओं की सुविधाओं के निर्माण पर भारत द्वारा आज विशेष ध्यान दिया जा रहा है।
कुशीनगर का विकास, यूपी सरकार और केंद्र सरकार की प्राथमिकताओं में है- पीएम श्री @narendramodi#यूपी_के_विकास_की_नई_उड़ान pic.twitter.com/axi2E3oJrp
— BJP (@BJP4India) October 20, 2021
ಕುಶಿನಗರ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಕೇವಲ ವಾಯು ಸಂಪರ್ಕದ ವಿಧಾನವಾಗಿರುವುದಿಲ್ಲ, ಬದಲಾಗಿ ಇದು ವ್ಯಾಪಾರದ ಪರಿಸರ ವ್ಯವಸ್ಥೆಯನ್ನು ಸೃಷ್ಟಿಸುತ್ತದೆ ಮತ್ತು ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಅವರು ಹೇಳಿದರು.
ಕುಶಿನಗರದ ಅಭಿವೃದ್ಧಿಯು ಉತ್ತರ ಪ್ರದೇಶ ಸರ್ಕಾರ ಹಾಗೂ ಕೇಂದ್ರಕ್ಕೆ ಆದ್ಯತೆಯಾಗಿದೆ ಎಂದು ಪ್ರಧಾನಿ ಹೇಳಿದರು. ಈ ನಿಟ್ಟಿನಲ್ಲಿ, ಭಗವಾನ್ ಬುದ್ಧನಿಗೆ ಸಂಬಂಧಿಸಿದ ಸ್ಥಳಗಳನ್ನು ಅಭಿವೃದ್ಧಿಪಡಿಸಲು, ಸಂಪರ್ಕವನ್ನು ಸುಧಾರಿಸಲು ಮತ್ತು ಬೌದ್ಧ ಭಕ್ತರಿಗೆ ಸೌಲಭ್ಯಗಳನ್ನು ಸೃಷ್ಟಿಸಲು ವಿಶೇಷ ಗಮನ ನೀಡಲಾಗುತ್ತಿದೆ ಎಂದಿದ್ದಾರೆ.
ರಾಷ್ಟ್ರೀಯ ವಿಮಾನಯಾನ ಏರ್ ಇಂಡಿಯಾವನ್ನು ಟಾಟಾ ಸಮೂಹಕ್ಕೆ ಇತ್ತೀಚೆಗೆ ಮಾರಾಟ ಮಾಡಿದ್ದನ್ನು ಉಲ್ಲೇಖಿಸಿದ ಪ್ರಧಾನಿ ಮೋದಿ, ಈ ಕ್ರಮವು ಭಾರತದ ವಾಯುಯಾನ ಕ್ಷೇತ್ರಕ್ಕೆ ಹೆಚ್ಚಿನ ಉತ್ತೇಜನ ನೀಡುತ್ತದೆ ಎಂದು ಹೇಳಿದರು. “ದೇಶದ ವಾಯುಯಾನ ಕ್ಷೇತ್ರವು ವೃತ್ತಿಪರವಾಗಿ ನಡೆಯಬೇಕು, ಅನುಕೂಲತೆ ಮತ್ತು ಸುರಕ್ಷತೆಗೆ ಆದ್ಯತೆ ನೀಡಬೇಕು” ಎಂದು ಅವರು ಅಭಿಪ್ರಾಯಿಸಿದ್ದಾರೆ.
ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಮತ್ತು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ಶ್ರೀಲಂಕಾದ ಸಂಪುಟ ಸಚಿವ ನಮಲ್ ರಾಜಪಕ್ಸೆ ನೇತೃತ್ವದ 130-ಸದಸ್ಯರ ನಿಯೋಗವು ಉದ್ಘಾಟನಾ ಸಮಾರಂಭದಲ್ಲಿ ಹಾಜರಿದ್ದರು.
ಕುಶಿನಗರ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಉದ್ಘಾಟನೆಯು ಶ್ರೀಲಂಕಾದ ಕೊಲಂಬೊದಿಂದ ಉದ್ಘಾಟನಾ ವಿಮಾನ ಬಂದು ಇಳಿಯುವ ಮೂಲಕ ನೆರವೇರಿಸಲ್ಪಟ್ಟಿತು, ಶ್ರೀಲಂಕಾದ ನಿಯೋಗದಲ್ಲಿ 100 ಕ್ಕೂ ಹೆಚ್ಚು ಬೌದ್ಧ ಸನ್ಯಾಸಿಗಳು ಮತ್ತು ಗಣ್ಯರು ಇದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.