ನವದೆಹಲಿ: ದೇಶ ಮತ್ತು ದೇಶದ ಜನರಿಗೆ ದ್ರೋಹ ಮಾಡುವವರಿಗೆ ಎಲ್ಲಿಯೂ ಸುರಕ್ಷಿತ ತಾಣಗಳು ಇರಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ.
ಗುಜರಾತ್ನಲ್ಲಿ ಸೆಂಟ್ರಲ್ ವೆಜಿಲೆನ್ಸ್ ಕಮಿಷನ್ (ಸಿವಿಸಿ) ಮತ್ತು ಕೇಂದ್ರೀಯ ತನಿಖಾ ದಳ (ಸಿಬಿಐ)ನ ಜಂಟಿ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ರಾಷ್ಟ್ರಕ್ಕೆ ವಂಚನೆ ಮಾಡುವ ಜನರಿಗೆ ಯಾವುದೇ ಕರುಣೆ ತೋರಿಸಬಾರದು ಎಂದು ಹೇಳಿದರು.
“ಮೋಸ ಮಾಡುವ ಅಥವಾ ಲೂಟಿ ಮಾಡುವ ಜನರು ಎಷ್ಟು ಪ್ರಬಲರಾಗಿದ್ದರೂ ಅವರಿಗೆ ಕರುಣೆ ತೋರಿಸಲಾಗುತ್ತಿಲ್ಲ, ಸರ್ಕಾರ ಅವರನ್ನು ಉಳಿಸುವುದಿಲ್ಲ ಎಂಬುದನ್ನು ಇಂದು ರಾಷ್ಟ್ರ ನಂಬುತ್ತದೆ. ”ಎಂದು ಪ್ರಧಾನಿ ಮೋದಿ ಹೇಳಿದರು.
और आज देश को ये भी विश्वास हुआ है कि देश को धोखा देने वाले, गरीब को लूटने वाले, कितने भी ताकतवर क्यों ना हो, देश और दुनिया में कहीं भी हों, अब उन पर रहम नहीं किया जाता, सरकार उनको छोड़ती नहीं है- पीएम श्री @narendramodi pic.twitter.com/7iFfjrFhcg
— BJP (@BJP4India) October 20, 2021
ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಲು ಸರ್ಕಾರ ಮಾಡಿದ ಕೆಲಸವನ್ನು ಅವರು ಎತ್ತಿ ತೋರಿಸಿದ್ದಾರೆ. ಕಳೆದ 6-7 ವರ್ಷಗಳಲ್ಲಿ ಮಾಡಿದ ಕೆಲಸದಿಂದಾಗಿ ಜನರು ಮಧ್ಯವರ್ತಿಗಳಿಲ್ಲದೆ ಸರ್ಕಾರದ ಯೋಜನೆಗಳ ಪ್ರಯೋಜನಗಳನ್ನು ಆನಂದಿಸಲು ಸಾಧ್ಯವಾಯಿತು ಎಂದು ಮೋದಿ ಹೇಳಿದ್ದಾರೆ.
ಹಿಂದಿನ ಸರ್ಕಾರಗಳ ರಾಜಕೀಯ ಮತ್ತು ಆಡಳಿತಾತ್ಮಕ ಇಚ್ಛಾಶಕ್ತಿಯ ಕೊರತೆಯಿಂದಾಗಿ ಆಳವಾಗಿ ಬೇರೂರಿದ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಲು ಸಾಧ್ಯವಾಗಿಲ್ಲ ಎಂದು ಪ್ರಧಾನಿ ಹೇಳಿದರು.
“ಇಂದು ಭ್ರಷ್ಟಾಚಾರ ನಿರ್ಮೂಲನೆ ಮೋಡಲು ರಾಜಕೀಯ ಇಚ್ಛೆ ಇದೆ. ಆಡಳಿತಾತ್ಮಕ ಮಟ್ಟದಲ್ಲಿ ನಿರಂತರ ಸುಧಾರಣೆಗಳನ್ನು ಮಾಡಲಾಗುತ್ತಿದೆ “ಎಂದು ಮೋದಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.