ಬೆಂಗಳೂರು: ವಾಲ್ಮೀಕಿ ಜಯಂತಿ ಪ್ರಯುಕ್ತ ನೀಡಲಾಗುವ ‘ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ’ ಗೆ 2020 ರ ಐವರು ಸಾಧಕರು ಮತ್ತು 2021 ನೇ ಸಾಲಿಗೆ ಸಂಬಂಧಿಸಿದಂತೆ 6 ಸಾಧಕರು ಸೇರಿ ಒಟ್ಟು 11 ಸಾಧಕರನ್ನು ಆಯ್ಕೆ ಮಾಡಲಾಗಿದ್ದು, ಈ ಸಾಧಕರಿಗೆ ಇಂದು ಪ್ರಶಸ್ತಿ ಪ್ರದಾನಿಸಲಾಯಿತು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಸಮಾರಂಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಈ ಪ್ರಶಸ್ತಿ ಪ್ರದಾನಿಸಿದರು.
ಈ ಪ್ರಶಸ್ತಿಯು 5 ಲಕ್ಷ ನಗದು ಬಹುಮಾನ, 20 ಗ್ರಾಂ ಚಿನ್ನದ ಪದಕ, ಫಲಕವನ್ನು ಒಳಗೊಂಡಿದೆ.
2020 ನೇ ಸಾಲಿಗೆ ಸಂಬಂಧಿಸಿದಂತೆ ಡಾ. ಕೆ. ಆರ್. ಪಾಟೀಲ, ಸಾಹಿತ್ಯಕ್ಕೆ ಸಂಬಂಧಿಸಿದಂತೆ ಬಿ. ಎಲ್. ವೇಣು, ಸಮಾಜ ಸೇವೆಗೆ ಸಂಬಂಧಿಸಿದಂತೆ ಗೌರಿ ಕೊರಗ, ಸಂಘಟನೆಗೆ ಸಂಬಂಧಿಸಿದಂತೆ ಮಾರಪ್ಪ ನಾಯಕ, ಸಮಾಜ ಸೇವೆಗೆ ಸಂಬಂಧಿಸಿದಂತೆ ತಿಪ್ಪೇಸ್ವಾಮಿ ಎಚ್. ಅವರಿಗೆ ಈ ಪ್ರಶಸ್ತಿ ನೀಡಲಾಗಿದೆ. 2021 ಕ್ಕೆ ಸಂಬಂಧಿಸಿದಂತೆ ಸಮಾಜ ಸೇವಾ ಕ್ಷೇತ್ರದಲ್ಲಿ ಕೆ. ಸಿ. ನಾಗರಾಜು, ಲಕ್ಷ್ಮೀ ಗಣಪತಿ ಸಿದ್ದಿ, ಭಟ್ರಹಳ್ಳಿ ಗೂಳಪ್ಪ, ಅಶ್ವತ್ಥ ರಾಮಯ್ಯ, ಜಂಬಯ್ಯ ನಾಯಕ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಪ್ರೊ. ಎಸ್. ಆರ್. ನಿರಂಜನ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಮುಖ್ಯಮಂತ್ರಿ @BSBommai ಅವರು ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಏರ್ಪಡಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಹಾಗೂ ವಾಲ್ಮೀಕಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡರು. (1/2)#ValmikiJayanti2021 pic.twitter.com/GQs1djYm2f
— CM of Karnataka (@CMofKarnataka) October 20, 2021
ಹಾಗೆಯೇ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಆಯೋಜಿಸಲಾಗಿದ್ದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಯೋಜನೆಗಳ ಕುರಿತ ಮಾಹಿತಿ ಪ್ರದರ್ಶನ ಹಾಗೂ ಬುಡಕಟ್ಟು ಸಮುದಾಯಗಳ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳನ್ನುಇಂದು ಸಿಎಂ ಬೊಮ್ಮಾಯಿ ಅವರು ಉದ್ಘಾಟಿಸಿ, ವೀಕ್ಷಿಸಿದರು.
ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಆಯೋಜಿಸಲಾಗಿದ್ದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಯೋಜನೆಗಳ ಕುರಿತ ಮಾಹಿತಿ ಪ್ರದರ್ಶನ ಹಾಗೂ ಬುಡಕಟ್ಟು ಸಮುದಾಯಗಳ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳನ್ನುಇಂದು ಮುಖ್ಯಮಂತ್ರಿ @BSBommai ರವರು ಉದ್ಘಾಟಿಸಿ, ವೀಕ್ಷಿಸಿದರು.#Valmiki_Jayanti2021 pic.twitter.com/hjRn9ZXYPQ
— CM of Karnataka (@CMofKarnataka) October 20, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.