ಬೆಂಗಳೂರು: ಭಾರತದ ನಾಗರಿಕರಿಗೆ 100 ಕೋಟಿ ಲಸಿಕೆ ನೀಡಿ ಸಾಧನೆ ಮೆರೆದ ಭಾರತಕ್ಕೆ, ಪ್ರಧಾನಿ ಮೋದಿ ಅವರಿಗೆ ಇಡೀ ವಿಶ್ವವೇ ಅಭಿನಂದನೆಗಳನ್ನು ಸಲ್ಲಿಸಿದೆ. ಆದರೆ ಈ ಮಹತ್ವದ ಕೆಲಸವನ್ನು ಟೀಕೆ ಮಾಡುತ್ತಲೇ ಕಾಲ ಕಳೆಯುವವರಿಗೆ ನಯಾ ಪೈಸೆ ಬೆಲೆ ಇಲ್ಲ ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ವಿಷಯ ಯಾವುದೇ ಇರಲಿ. ಅದರ ವಿರುದ್ಧ ಟೀಕೆಗಳು ಕೇಳಿ ಬಂದಾಗ ಅದಕ್ಕೆ ಹೆಚ್ಚು ಪ್ರಚಾರ ಬರುತ್ತದೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಲಿ. ಕೇಂದ್ರ ಮೋದಿ ಸರ್ಕಾರದ ಈ ಸಾಧನೆ ಮತ್ತಷ್ಟು ಜನರಿಗೆ ತಲುಪುತ್ತದೆ ಎಂದು ಅವರು ತಿರುಗೇಟು ನೀಡಿದ್ದಾರೆ.
ಕೊರೋನಾ ಸಂಕಷ್ಟದ ಸಮಯದಲ್ಲಿ ಮನೆಯಿಂದ ಹೊರಬಂದು ಕಾರ್ಯ ನಿರ್ವಹಿಸಿದ ವೈದ್ಯಕೀಯ ಕ್ಷೇತ್ರ, ಇತರ ಅಗತ್ಯ ಸೇವೆಯಲ್ಲಿ ತೊಡಗಿಸಿಕೊಂಡಿದ್ದವರಿಗೆ ಈ ಸಂದರ್ಭದಲ್ಲಿ ಅವರು ಧನ್ಯವಾದ ಸಮರ್ಪಿಸಿದ್ದಾರೆ. ಹಾಗೆಯೇ ಕೆಲವರಿಗೆ ಪ್ರಧಾನಿ ಮೋದಿ ಅವರನ್ನು ಟೀಕಿಸುವುದೇ ಕೆಲಸ. ಟೀಕೆ ಮಾಡದಿದ್ದಲ್ಲಿ ತಿಂದದ್ದು ಕರಗುವುದಿಲ್ಲ. ವಿಪಕ್ಷದ ನಾಯಕರಿಗೆ ಯಾವುದನ್ನು ಟೀಕಿಸಬೇಕು, ಯಾವುದನ್ನು ಟೀಕಿಸಬಾರದು ಎಂಬ ಪರಿಜ್ಞಾನ ಇಲ್ಲ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.