ನವದೆಹಲಿ: ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಒಂದು ವಾರದಲ್ಲಿ ದೀನದಯಾಳ್ ಅಂತ್ಯೋದಯ ಯೋಜನೆ – ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಅಡಿಯಲ್ಲಿ ಒಟ್ಟು 152 ಆರ್ಥಿಕ ಸಾಕ್ಷರತೆ ಮತ್ತು ಸೇವಾ ವಿತರಣಾ (SAKSHAM ಕೇಂದ್ರಗಳು) ಕೇಂದ್ರಗಳನ್ನು ಆರಂಭಿಸಲಾಗಿದೆ.
ಈ ಕೇಂದ್ರಗಳ ಮುಖ್ಯ ಉದ್ದೇಶವೆಂದರೆ ಆರ್ಥಿಕ ಸಾಕ್ಷರತೆಯನ್ನು ಒದಗಿಸುವುದು ಮತ್ತು ಸ್ವಸಹಾಯ ಗುಂಪಿನ ಸದಸ್ಯರು ಮತ್ತು ಗ್ರಾಮೀಣ ಬಡವರಿಗೆ ಹಣಕಾಸು ಸೇವೆಗಳನ್ನು ತಲುಪಿಸಲು ಅನುಕೂಲ ಮಾಡಿಕೊಡುವುದು. 13 ರಾಜ್ಯಗಳ 77 ಜಿಲ್ಲೆಗಳಲ್ಲಿ ಕೇಂದ್ರಗಳನ್ನು ಆರಂಭಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವಾಲಯ ತಿಳಿಸಿದೆ.
ಗ್ರಾಮೀಣ ಪ್ರದೇಶಗಳಲ್ಲಿ ಸ್ವ-ಸಹಾಯ ಗುಂಪುಗಳ ಮೂಲಭೂತ ಆರ್ಥಿಕ ಅಗತ್ಯಗಳಿಗಾಗಿ ಈ ಕೇಂದ್ರಗಳು ಒಂದು ಪರಿಹಾರವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಸಚಿವಾಲಯ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.