ನವದೆಹಲಿ: 2019 ರಲ್ಲಿ ಜಾಮಿಯಾ ನಗರ ಪ್ರದೇಶದಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಮತ್ತು ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಬಂಧಿಸಲ್ಪಟ್ಟ ಜೆಎನ್ಯು ವಿದ್ಯಾರ್ಥಿ ಶರ್ಜೀಲ್ ಇಮಾಮ್ನ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ಶುಕ್ರವಾರ ವಜಾಗೊಳಿಸಿದೆ.
ಶರ್ಜೀಲ್ ಭಾಷಣದ ವಿಷಯಗಳು ಕೋಮು ಶಾಂತಿ ಮತ್ತು ಸಾಮರಸ್ಯವನ್ನು ದುರ್ಬಲಗೊಳಿಸುವ ಪರಿಣಾಮವನ್ನು ಹೊಂದಿವೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅನೂಜ್ ಅಗರ್ವಾಲ್ ತಮ್ಮ ಆದೇಶದಲ್ಲಿ, “13.12.2019 ರ ಭಾಷಣವು ಕೋಮು ವಿಭಜನೆಯ ಮಾರ್ಗಗಳಲ್ಲಿರುವುದು ಸ್ಪಷ್ಟವಾಗಿದೆ” ಎಂದು ಹೇಳಿದ್ದಾರೆ.
“ನನ್ನ ಅಭಿಪ್ರಾಯದಲ್ಲಿ, ಬೆಂಕಿಯಂತಹ ಭಾಷಣದ ಧಾಟಿ ಸಾರ್ವಜನಿಕ ಶಾಂತಿ, ಸಮಾಜದ ಶಾಂತಿ ಮತ್ತು ಸಾಮರಸ್ಯದ ಮೇಲೆ ದುರ್ಬಲಗೊಳಿಸುವ ಪರಿಣಾಮವನ್ನು ಬೀರುತ್ತದೆ” ಎಂದು ನ್ಯಾಯಾಲಯ ಹೇಳಿದೆ.
ಡಿಸೆಂಬರ್ 15, 2019 ರಂದು, ಪೌರತ್ವ ತಿದ್ದುಪಡಿ ಮಸೂದೆಯ ವಿರುದ್ಧದ ಪ್ರತಿಭಟನೆಯಲ್ಲಿ ಜಾಮಿಯಾ ನಗರ ಪ್ರದೇಶದಲ್ಲಿ 3,000 ಕ್ಕೂ ಹೆಚ್ಚು ಜನರನ್ನು ಒಳಗೊಂಡ ಗುಂಪು ಪೊಲೀಸ್ ಸಿಬ್ಬಂದಿ ಮೇಲೆ ದಾಳಿ ಮಾಡಿ ಹಲವಾರು ವಾಹನಗಳನ್ನು ಸುಟ್ಟು ಹಾಕಿತು. ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಹೊರಗೆ CAA-NRC ವಿರುದ್ಧ ಮಾಡಿದ ಶರ್ಜೀಲ್ ಇಮಾಮ್ ಭಾಷಣಗಳಿಂದ ಈ ಗುಂಪು ಪ್ರಚೋದಿಸಲ್ಪಟಿತು ಎಂದು ದೂರಿನಲ್ಲಿ ತಿಳಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.