ನವದೆಹಲಿ: ‘ಆತ್ಮನಿರ್ಭರ ಭಾರತ ಸ್ವಯಂಪೂರ್ಣ ಗೋವಾ’ ಕಾರ್ಯಕ್ರಮದ ಫಲಾನುಭವಿಗಳೊಂದಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಂವಾದ ನಡೆಸಿದ್ದಾರೆ.
ಅಕ್ಟೋಬರ್ 1, 2020 ರಂದು ಪ್ರಾರಂಭಿಸಲಾದ ‘ಸ್ವಯಂಪೂರ್ಣ ಗೋವಾ’ ಉಪಕ್ರಮವು ‘ಆತ್ಮನಿರ್ಭರ ಭಾರತ’ದಿಂದ ಪ್ರೇರಿತವಾಗಿದೆ. ಈ ಕಾರ್ಯಕ್ರಮದ ಅಡಿಯಲ್ಲಿ, ‘ಸ್ವಯಂಪೂರ್ಣ ಮಿತ್ರ’ ಎಂಬ ರಾಜ್ಯ ಸರ್ಕಾರಿ ಅಧಿಕಾರಿಯನ್ನು ನೇಮಿಸಲಾಗಿದ್ದು, ಬಹು ಇಲಾಖೆಗಳ ನಡುವಿನ ಸಮನ್ವಯದ ಮೂಲಕ ಅವರು ವಿವಿಧ ಸರ್ಕಾರಿ ಯೋಜನೆಗಳು ಮತ್ತು ಪ್ರಯೋಜನಗಳು ಅರ್ಹ ಫಲಾನುಭವಿಗಳಿಗೆ ಲಭ್ಯವಾಗುವಂತೆ ನೋಡಿಕೊಳ್ಳುತ್ತಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಮೋದಿ, ಗೋವಾ ಎಂದರೆ ಪ್ರಕೃತಿ ಮತ್ತು ಪ್ರವಾಸೋದ್ಯಮ, ಆದರೆ ಇಂದು ಇದರ ಅರ್ಥ ಹೊಸ ಅಭಿವೃದ್ಧಿ ಮತ್ತು ಸಾಮೂಹಿಕ ಪ್ರಯತ್ನಗಳ ಪ್ರತಿಬಿಂಬ ಎಂದಾಗಿದೆ.
ಕಳೆದ 1.5 – 2 ವರ್ಷಗಳಲ್ಲಿ, ಗೋವಾ ಕೇವಲ ಕೋವಿಡ್-19 ಸಾಂಕ್ರಾಮಿಕವನ್ನು ಮಾತ್ರವಲ್ಲದೆ ಹಲವಾರು ಚಂಡಮಾರುತಗಳು ಮತ್ತು ಪ್ರವಾಹಗಳನ್ನು ಎದುರಿಸಿದೆ ಎಂದು ಅವರು ಹೇಳಿದರು.
“ಗೋವಾದ ಪ್ರವಾಸೋದ್ಯಮ ಕ್ಷೇತ್ರವು ಹಲವಾರು ತೊಂದರೆಗಳನ್ನು ಎದುರಿಸಿತು, ಆದರೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ನಿರಂತರವಾಗಿ ಪರಿಹಾರ ಕಾರ್ಯವನ್ನು ಮುಂದುವರೆಸಿವೆ” ಎಂದು ಪ್ರಧಾನಿ ಮೋದಿ ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.