ಮಂಗಳೂರು: ಹಿಂದೂ ಧಾರ್ಮಿಕ ಸ್ಥಳಗಳನ್ನು ಅಕ್ರಮವಾಗಿ ಹೇಡಿಗಳಂತೆ ರಾತ್ರಿ ಪ್ರವೇಶಿಸಿ ಭಗ್ನಗೊಳಿಸುವವರಿಗೆ ಕ್ಷಮೆ ನೀಡಲಾಗದು. ಧಾರ್ಮಿಕ ಭಾವನೆಗಳ ಮೂಲಕ ಕೆಣಕಿದರೆ ನಾವು ಕಾನೂನು ಮೂಲಕ ಮರೆಯಲಾದ ಪಾಠ ಕಲಿಸುತ್ತೇವೆ ಎಂದು ಶಾಸಕ ಡಾ. ಭರತ್ ಶೆಟ್ಟಿ ಕಠಿಣ ಎಚ್ಚರಿಕೆ ನೀಡಿದ್ದಾರೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು
ಪೊಲೀಸ್ ಗುಪ್ತಚರ ವ್ಯವಸ್ಥೆ ಬಲಪಡಿಸಿ, ಹಿಂದೂ ಪೂಜಾ ಸ್ಥಳಗಳನ್ನು ಭಗ್ನಗೊಳಿಸುವ ಮೂಲಕ ಕ್ಷೇತ್ರದಲ್ಲಿ ಕೋಮು ಭಾವನೆ ಕೆರಳಿಸುವವರ ವಿರುದ್ದ ವಿಶೇಷ ಕಾರ್ಯಚರಣೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಡಾ. ಭರತ್ ಶೆಟ್ಟಿ ಪೊಲೀಸ್ ಇಲಾಖೆಗೆ ಸೂಚಿಸಿದ್ದಾರೆ.
ಬೈಕಂಪಾಡಿಯಲ್ಲಿ ಕರ್ಕೇರ ನಾಗ ಮೂಲಸ್ಥಾನ ವಿಗ್ರಹ ಭಗ್ನ ಘಟನೆ ಬಳಿಕ ಕೆಲವೇ ದಿನದ ಅಂತರದಲ್ಲಿ ಇದೀಗ ಕೂಳೂರಿನಲ್ಲಿ ನಡೆದಿದೆ. ನನ್ನ ಕ್ಷೇತ್ರದಲ್ಲಿ ಕೋಮು ಸಂಘರ್ಷ ಉಂಟು ಮಾಡಲು ಷಡ್ಯಂತ್ರ ನಡೆಸುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು. ದೇವಸ್ಥಾನ, ನಾಗಬನ, ದೈವಸ್ಥಾನಗಳು ಹಿಂದೂಗಳ ಪೂಜನೀಯ ಸ್ಥಳಗಳಾಗಿದ್ದು ಇವುಗಳನ್ನು ಧ್ವಂಸಗೊಳಿಸುವ ಷಡ್ಯಂತ್ರವನ್ನು ಪತ್ತೆ ಹಚ್ಚಿ ಜೈಲಿಗೆ ತಳ್ಳುತ್ತೇವೆ.
ಮುಂದಿನ ದಿನಗಳಲ್ಲಿ ಇದಕ್ಕಾಗಿ ವಿಶೇಷ ತಂಡ ರಚನೆ ಮಾಡಿ ಈ ರೀತಿಯ ಹೀನ ಕೃತ್ಯ ಮಾಡುವ ಅಪರಾಧಿಗಳನ್ನು ಮಟ್ಟ ಹಾಕುವಂತೆ ಗೃಹ ಸಚಿವರಿಗೆ ಮನವಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.