ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅಲ್ಪಸಂಖ್ಯಾತ ಸಮುದಾಯಗಳ ಜನಸಂಖ್ಯೆಯನ್ನು ಹೊಂದಿರುವ ಪ್ರದೇಶಗಳ ಮೇಲೆ ಕಣ್ಗಾವಲು ಇಡಲು ಡ್ರೋನ್ಗಳನ್ನು ನಿಯೋಜಿಸಲು ಅಲ್ಲಿನ ಆಡಳಿತ ನಿರ್ಧರಿಸಿದೆ.
ಇತ್ತೀಚೆಗೆ ಕಾಶ್ಮೀರದಲ್ಲಿ ಅಲ್ಪಸಂಖ್ಯಾತರು ನಿರ್ದಿಷ್ಟವಾಗಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ಹತ್ಯೆಗಳು ಮತ್ತು ದಾಳಿಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ಮತ್ತು ಸ್ಥಳೀಯ ಪೊಲೀಸರು ಶ್ರೀನಗರ ಮತ್ತು ಲಾಲ್ ಚೌಕ್ನಂತಹ ಅಲ್ಪಸಂಖ್ಯಾತರ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ವೈಮಾನಿಕ ಕಣ್ಗಾವಲು ಹೆಚ್ಚಿಸಿದ್ದಾರೆ.
ಶ್ರೀನಗರದ ಪ್ರತಾಪ್ ಪಾರ್ಕ್ ಪ್ರದೇಶದಲ್ಲಿ ಪೊಲೀಸರು ಮತ್ತು ಸಿಆರ್ಪಿಎಫ್ನಿಂದ ಈ ಡ್ರೋನ್ಗಳನ್ನು ಪರೀಕ್ಷಿಸಲಾಯಿತು.
ಆಗಸ್ಟ್ 2019 ರಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೊದಲ ಕೇಂದ್ರಾಡಳಿತ ಪ್ರದೇಶಕ್ಕೆ ಭೇಟಿ ನೀಡುವ ಮೊದಲು ಈ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.
“ಅಲ್ಪಸಂಖ್ಯಾತ ಸಮುದಾಯದ ಸದಸ್ಯರು ಮತ್ತು ವಲಸೆ ಕಾರ್ಮಿಕರ ಮೇಲೆ ಇತ್ತೀಚಿನ ದಾಳಿಗಳ ಹಿನ್ನೆಲೆಯಲ್ಲಿ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ” ಎಂದು ಸಿಆರ್ಪಿಎಫ್ ಡೆಪ್ಯುಟಿ ಇನ್ಸ್ಪೆಕ್ಟರ್ ಜನರಲ್ ಮ್ಯಾಥ್ಯೂ ಎ ಜಾನ್ ತಿಳಿಸಿದ್ದಾರೆ.
ಹಿಂದಿನ ಎರಡು ವಾರಗಳಲ್ಲಿ ಕೇಂದ್ರಾಡಳಿತ ಪ್ರದೇಶದಲ್ಲಿ ನಡೆದ ದಾಳಿಯಲ್ಲಿ ಸುಮಾರು 11 ವ್ಯಕ್ತಿಗಳು, ಮುಖ್ಯವಾಗಿ ಅಲ್ಪಸಂಖ್ಯಾತರು ಮತ್ತು ವಲಸಿಗರು ಸಾವನ್ನಪ್ಪಿದ್ದಾರೆ.
ಶ್ರೀನಗರದ ಫಾರ್ಮಸಿಸ್ಟ್ ಎಂಎಲ್ ಬಿಂದ್ರೂ, ಬಿಹಾರಿ ವ್ಯಾಪಾರಿ ವೀರೇಂದ್ರ ಪಾಸ್ವಾನ್, ಬಿಹಾರಿ ಕಾರ್ಮಿಕರಾದ ಜೋಗಿಂದರ್ ರೇಶಿ ದೇವ್ ಮತ್ತು ರಾಜಾ ರೇಶಿ ದೇವ್, ಶಾಲಾ ಶಿಕ್ಷಕ ದೀಪಕ್ ಚಂದ್ ಮತ್ತು ಸಿಖ್ ಸೇರಿದಂತೆ ನಾಲ್ಕು ನಾಗರಿಕ ಹತ್ಯೆ ನಡೆದಿದ್ದು, ಇದರ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ನಡೆಸುತ್ತಿದೆ.
ಕೇಂದ್ರಾಡಳಿತ ಪ್ರದೇಶದ ಕಾಶ್ಮೀರ ವಿಭಾಗದಲ್ಲಿ, ಮುಸ್ಲಿಮರು 96.41 ಶೇಕಡಾ ಜನಸಂಖ್ಯೆ ಹೊಂದಿದ್ದಾರೆ. ಹಿಂದುಗಳು 2.45 ಶೇಕಡಾ ಮತ್ತು ಸಿಖ್ಖರು 0.81 ರಷ್ಟು ಜನಸಂಖ್ಯೆ ಹೊಂದಿರುವ ಸಮುದಾಯಗಳಾಗಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.