ಸಿದ್ಧಾರ್ಥನಗರ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೋಮವಾರ ಇಂದು ಉತ್ತರ ಪ್ರದೇಶದಲ್ಲಿ 9 ವೈದ್ಯಕೀಯ ಕಾಲೇಜುಗಳನ್ನು ಸಿದ್ಧಾರ್ಥನಗರದಿಂದ ಉದ್ಘಾಟಿಸಿದರು.
ಉತ್ತರಪ್ರದೇಶ ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಕೂಡ ಕಾರ್ಯಕ್ರಮದಲ್ಲಿ ಹಾಜರಿದ್ದರು.
ಈ ಒಂಬತ್ತು ವೈದ್ಯಕೀಯ ಕಾಲೇಜುಗಳು ಸಿದ್ಧಾರ್ಥನಗರ, ಇಟಾಹ್, ಹರ್ಡೋಯ್, ಪ್ರತಾಪಗಢ, ಫತೇಪುರ್, ಡಿಯೋರಿಯಾ, ಗಾಜಿಪುರ, ಮಿರ್ಜಾಪುರ ಮತ್ತು ಜೌನ್ಪುರದಲ್ಲಿವೆ.
“ಜಿಲ್ಲಾ/ರೆಫರಲ್ ಆಸ್ಪತ್ರೆಗಳೊಂದಿಗೆ ಹೊಸ ವೈದ್ಯಕೀಯ ಕಾಲೇಜುಗಳ ಸ್ಥಾಪನೆ” ಕೇಂದ್ರ ಪ್ರಾಯೋಜಿತ ಯೋಜನೆಯಡಿ ಎಂಟು ವೈದ್ಯಕೀಯ ಕಾಲೇಜುಗಳನ್ನು ಮಂಜೂರು ಮಾಡಲಾಗಿದೆ. ಜೌನ್ಪುರದ ಒಂದು ವೈದ್ಯಕೀಯ ಕಾಲೇಜನ್ನು ರಾಜ್ಯ ಸರ್ಕಾರವು ತನ್ನ ಸಂಪನ್ಮೂಲಗಳ ಮೂಲಕ ಕಾರ್ಯನಿರ್ವಹಿಸುವಂತೆ ಮಾಡಿದೆ.
ಕೇಂದ್ರ ಪ್ರಾಯೋಜಿತ ಯೋಜನೆಯಡಿ ಹಿಂದುಳಿದ ಮತ್ತು ಮಹತ್ವಾಕಾಂಕ್ಷೆಯ ಜಿಲ್ಲೆಗಳಿಗೆ ಆದ್ಯತೆ ನೀಡಲಾಗುತ್ತದೆ. ಆರೋಗ್ಯ ವೃತ್ತಿಪರರ ಲಭ್ಯತೆಯನ್ನು ಹೆಚ್ಚಿಸುವುದು, ವೈದ್ಯಕೀಯ ಕಾಲೇಜುಗಳ ವಿತರಣೆಯಲ್ಲಿ ಅಸ್ತಿತ್ವದಲ್ಲಿರುವ ಭೌಗೋಳಿಕ ಅಸಮತೋಲನವನ್ನು ಸರಿಪಡಿಸುವುದು ಮತ್ತು ಜಿಲ್ಲಾ ಆಸ್ಪತ್ರೆಗಳ ಅಸ್ತಿತ್ವದಲ್ಲಿರುವ ಮೂಲಸೌಕರ್ಯಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವುದು ಈ ಯೋಜನೆಯ ಗುರಿಯಾಗಿದೆ.
ಯೋಜನೆಯ ಮೂರು ಹಂತಗಳ ಅಡಿಯಲ್ಲಿ, 157 ಹೊಸ ವೈದ್ಯಕೀಯ ಕಾಲೇಜುಗಳನ್ನು ರಾಷ್ಟ್ರದಾದ್ಯಂತ ಅನುಮೋದಿಸಲಾಗಿದೆ. ಅದರಲ್ಲಿ 63 ವೈದ್ಯಕೀಯ ಕಾಲೇಜುಗಳು ಈಗಾಗಲೇ ಕಾರ್ಯನಿರ್ವಹಿಸುತ್ತಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.