ಬೆಂಗಳೂರು: ನ. 1 ರ ಕನ್ನಡ ರಾಜ್ಯೋತ್ಸವದ ಅಂಗವಾಗಿ ನಡೆಯುವ ಕನ್ನಡಕ್ಕಾಗಿ ನಾವು ಅಭಿಯಾನದ ಹಿನ್ನೆಲೆಯಲ್ಲಿ ಅ. 28 ರಂದು ಆಯೋಜಿಸಲಾದ ಲಕ್ಷ ಕಂಠಗಳ ಕನ್ನಡ ಗೀತಗಾಯನ ಕಾರ್ಯಕ್ರಮಕ್ಕೆ ಭರದ ಸಿದ್ಧತೆ ನಡೆಯುತ್ತಿದೆ.
ರಾಜ್ಯದ ಎಲ್ಲ 31 ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಗಳು ಸೇರಿದಂತೆ ಸಂಬಂಧಿಸಿದಂತೆ ಇರುವ ಎಲ್ಲಾ ಅಧಿಕಾರಿಗಳ ಜೊತೆಗೆ ಚರ್ಚಿಸಿ ಸಿದ್ಧತೆ ನಡೆಸಲಾಗುತ್ತಿದೆ. ರಾಜ್ಯದ ಸಾವಿರಕ್ಕೂ ಅಧಿಕ ಪ್ರದೇಶಗಳಲ್ಲಿ ಐದು ಲಕ್ಷಕ್ಕೂ ಅಧಿಕ ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವ ಸುನಿಲ್ ಕುಮಾರ್ ತಿಳಿಸಿದ್ದಾರೆ.
ವಿಶ್ವದಾದ್ಯಂತ ಏಕ ಕಾಲದಲ್ಲಿ…
ಲಕ್ಷ ಲಕ್ಷ ಕಂಠಗಳ ಕನ್ನಡ ಗೀತ ಗಾಯನ…೨೮ ಅಕ್ಟೋಬರ್ ೨೦೨೧#ಮಾತಾಡ್_ಮಾತಾಡ್_ಕನ್ನಡ@BSBommai pic.twitter.com/KEvqTMWCvL
— Sunil Kumar Karkala (@karkalasunil) October 26, 2021
ಈ ಕಾರ್ಯಕ್ರಮವನ್ನು ಸರ್ಕಾರದ ವಿವಿಧ ಇಲಾಖೆಗಳ ಸಹಯೋಗ, ಸಚಿವರ ಸಹಕಾರದೊಂದಿಗೆ ನಡೆಸಲಾಗುತ್ತಿದೆ. ಕನ್ನಡ ಭಾಷೆಯ ಮೇಲಿನ ಅಭಿಮಾನ, ಪ್ರೀತಿಯನ್ನು ಪ್ರಸ್ತುತ ಪಡಿಸಲು ಇದೊಂದು ಸಮರ್ಪಕ ವೇದಿಕೆಯಾಗಲಿದೆ. ಈ ಬಗ್ಗೆ ಮಾಹಿತಿ ನೀಡುವಿಕೆ, ಪೂರ್ವ ಸಿದ್ಧತೆ ಬಗ್ಗೆ ಹೆಚ್ಚು ಕಾಳಜಿ ವಹಿಸಿ ಕೆಲಸ ಮಾಡುವಂತೆಯೂ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.