ನವದೆಹಲಿ: ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳ ಸಮಿತಿಯು ಬುಧವಾರ 11 ಕ್ರೀಡಾಪಟುಗಳನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗೆ ಶಿಫಾರಸು ಮಾಡಿದೆ. ಇದು ಭಾರತದ ಅತ್ಯುನ್ನತ ಕ್ರೀಡಾ ಗೌರವವಾಗಿದೆ.
ಟೋಕಿಯೊ ಒಲಿಂಪಿಕ್ಸ್ 2020 ರಲ್ಲಿ ಜಾವೆಲಿನ್ನಲ್ಲಿ ಐತಿಹಾಸಿಕ ಚಿನ್ನದ ಪದಕವನ್ನು ಪಡೆದ ನೀರಜ್ ಚೋಪ್ರಾ, ಇತರ ಒಲಿಂಪಿಕ್ ಪದಕ ವಿಜೇತರಾದ ರವಿ ದಹಿಯಾ, ಪಿಆರ್ ಶ್ರೀಜೇಶ್ ಮತ್ತು ಲೊವ್ಲಿನಾ ಬೊರ್ಗೊಹೈ ಅವರ ಹೆಸರು ಪಟ್ಟಿಯಲ್ಲಿದೆ. ಭಾರತದ ಹಿರಿಯ ಮಹಿಳಾ ಕ್ರಿಕೆಟ್ ಆಟಗಾರ್ತಿ ಮಿಥಾಲಿ ರಾಜ್, ಫುಟ್ಬಾಲ್ ಆಟಗಾರ ಸುನಿಲ್ ಛೆಟ್ರಿ ಅವರನ್ನು ಕೂಡ ಉನ್ನತ ಗೌರವಕ್ಕೆ ಹೆಸರಿಸಲಾಗಿದೆ.
ಛೆಟ್ರಿ ಅವರು ಭಾರತದ ಅತ್ಯುನ್ನತ ಕ್ರೀಡಾ ಗೌರವಕ್ಕೆ ಶಿಫಾರಸು ಮಾಡಲ್ಪಟ್ಟ ಮೊದಲ ಭಾರತೀಯ ಫುಟ್ಬಾಲ್ ಆಟಗಾರನಾಗಿದ್ದಾರೆ.
2021 ಭಾರತಕ್ಕೆ ವಿಶೇಷ ವರ್ಷವಾಗಿದ್ದು, ಹಲವಾರು ಕ್ರೀಡಾಪಟುಗಳು ಟೋಕಿಯೊ ಒಲಿಂಪಿಕ್ಸ್ 2020 ಮತ್ತು ಟೋಕಿಯೊ ಪ್ಯಾರಾಲಿಂಪಿಕ್ಸ್ 2020 ನಲ್ಲಿ ದೇಶವನ್ನು ಹೆಮ್ಮೆ ಪಡಿಸಿದ್ದಾರೆ. ಪ್ಯಾರಾಲಿಂಪಿಕ್ಸ್ನಲ್ಲಿ ಎರಡು ಪದಕಗಳನ್ನು ಗೆದ್ದ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾದ ಭಾರತೀಯ ಪ್ಯಾರಾಲಿಂಪಿಯನ್ ಅವನಿ ಲೆಖರಾ ಅವರನ್ನು ಸಹ ಖೇಲ್ ರತ್ನ ಪ್ರಶಸ್ತಿಗೆ ಶಿಫಾರಸು ಮಾಡಲಾಗಿದೆ. 2020 ರ ಪ್ಯಾರಾಲಿಂಪಿಕ್ಸ್ನಲ್ಲಿ ಎಫ್ 64 ಪ್ಯಾರಾ ಜಾವೆಲಿನ್ ಥ್ರೋನಲ್ಲಿ ಚಿನ್ನದ ಪದಕ ಗೆದ್ದ ಸುಮಿತ್ ಆಂಟಿಲ್ ಅವರನ್ನು ಖೇಲ್ ರತ್ನಕ್ಕೆ ಶಿಫಾರಸು ಮಾಡಲಾಗಿದೆ.
ಇದರೊಂದಿಗೆ 35 ಭಾರತೀಯ ಅಥ್ಲೀಟ್ಗಳನ್ನೂ ಅರ್ಜುನ ಪ್ರಶಸ್ತಿಗೆ ಶಿಫಾರಸು ಮಾಡಲಾಗಿದೆ.
ಖೇಲ್ ರತ್ನ ಪ್ರಶಸ್ತಿಗೆ ಶಿಫಾರಸು ಮಾಡಲಾದ 11 ಭಾರತೀಯ ಕ್ರೀಡಾಪಟುಗಳ ಪಟ್ಟಿ ಇಲ್ಲಿದೆ:
- ನೀರಜ್ ಚೋಪ್ರಾ (ಅಥ್ಲೆಟಿಕ್ಸ್)
- ರವಿ ದಹಿಯಾ (ಕುಸ್ತಿ)
- ಪಿಆರ್ ಶ್ರೀಜೇಶ್ (ಹಾಕಿ)
- ಲೊವ್ಲಿನಾ ಬೊರ್ಗೊಹೈ (ಬಾಕ್ಸಿಂಗ್)
- ಸುನಿಲ್ ಛೆಟ್ರಿ (ಫುಟ್ಬಾಲ್)
- ಮಿಥಾಲಿ ರಾಜ್ (ಕ್ರಿಕೆಟ್)
- ಪ್ರಮೋದ್ ಭಗತ್ (ಬ್ಯಾಡ್ಮಿಂಟನ್)
- ಸುಮಿತ್ ಆಂಟಿಲ್ (ಜಾವೆಲಿನ್)
- ಅವನಿ ಲೇಖರ (ಶೂಟಿಂಗ್)
- ಕೃಷ್ಣ ನಗರ (ಬ್ಯಾಡ್ಮಿಂಟನ್)
- ಎಂ ನರ್ವಾಲ್ (ಶೂಟಿಂಗ್)
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.