ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ದೀಪಾವಳಿ ಹಬ್ಬದ ಪ್ರಯುಕ್ತ ಸರ್ಕಾರ ಉಡುಗೊರೆ ನೀಡಿದೆ. 3% ತುಟ್ಟಿಭತ್ಯೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.
2021 ರ ಜುಲೈ ತಿಂಗಳಿನಿಂದಲೇ ಪೂರ್ವಾನ್ವಯವಾಗುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತುಟ್ಟಿಭತ್ಯೆ ಮಂಜೂರು ಮಾಡಿದ್ದಾರೆ. ಈ ಹೆಚ್ಚಳದ ಮೂಲಕ ನೌಕರರ ಮೂಲ ವೇತನದ 21.50% ಗಳಷ್ಟಿದ್ದ ತುಟ್ಟಿಭತ್ಯೆ 24.50% ಗೆ ಏರಿಕೆಯಾದಂತಾಗಿದೆ.
ಈ ಸಂಬಂಧ ರಾಜ್ಯ ಸರ್ಕಾರಿ ನೌಕರರ ಸಂಘ ಮನವಿ ಸಲ್ಲಿಸಿದ 24 ಗಂಟೆಗಳ ಒಳಗಾಗಿ ಈ ಮನವಿಗೆ ಸ್ಪಂದನೆ ನೀಡಿ ತುಟ್ಟಿಭತ್ಯೆ ಹೆಚ್ಚಳ ಮಾಡಿದ ಮುಖ್ಯಮಂತ್ರಿಗಳಿಗೆ ಸಂಘ ಧನ್ಯವಾದ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.