ನವದೆಹಲಿ: ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ನಿನ್ನೆ ನವದೆಹಲಿಯ ವಿಜ್ಞಾನ ಭವನದಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯ ಸಚಿವರೊಂದಿಗೆ ಸಂವಾದ ನಡೆಸಿದರು.
ಸಭೆಯಲ್ಲಿ ಕೋವಿಡ್-19 ಲಸಿಕೆ ಅಭಿಯಾನ ಮತ್ತು ಸೋಮವಾರದಂದು ಆರಂಭಿಸಲಾದ ಪ್ರಧಾನಮಂತ್ರಿ ಆಯುಷ್ಮಾನ್ ಭಾರತ್ ಆರೋಗ್ಯ ಮೂಲಸೌಕರ್ಯ ಮಿಷನ್ ಕುರಿತು ಚರ್ಚಿಸಲಾಯಿತು.
ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಆರೋಗ್ಯ ಸಚಿವರು, ಕೋವಿಡ್ -19 ಲಸಿಕೆ ಅಭಿಯಾನವನ್ನು ವೇಗಗೊಳಿಸುವ ಉದ್ದೇಶದಿಂದ ಸರ್ಕಾರವು ಹರ್ ಘರ್ ದಸ್ತಕ್ ಎಂಬ ಮೆಗಾ ಲಸಿಕೆ ಅಭಿಯಾನವನ್ನು ಪ್ರಾರಂಭಿಸಲಿದೆ ಎಂದು ಹೇಳಿದರು.
आज राज्यों व UTs के स्वास्थ्य मंत्रियों के साथ बैठक की व COVID-19 टीकाकरण, कोविड प्रबंधन तथा PM आयुष्मान भारत हेल्थ इंफ्रास्ट्रक्चर मिशन को लेकर सार्थक चर्चा हुई।
अगले एक महीने 'हर-घर दस्तक' Door-to-Door टीकाकरण अभियान चलाया जाएगा। (1/2) pic.twitter.com/yMaXkqxuzo
— Dr Mansukh Mandaviya (@mansukhmandviya) October 27, 2021
ಮುಂದಿನ ಒಂದು ತಿಂಗಳ ಅಭಿಯಾನದ ಅಡಿಯಲ್ಲಿ, ಎಲ್ಲಾ ರಾಜ್ಯಗಳ ಆರೋಗ್ಯ ಕಾರ್ಯಕರ್ತರು ಎರಡನೇ ಡೋಸ್ಗೆ ಅರ್ಹರಾಗಿರುವ ಜನರಿಗೆ ಮತ್ತು ಮೊದಲ ಡೋಸ್ ತೆಗೆದುಕೊಳ್ಳದವರಿಗೆ ಲಸಿಕೆ ಹಾಕಲು ಮನೆ-ಮನೆಗೆ ಭೇಟಿ ನೀಡುತ್ತಾರೆ. ಅರ್ಹ ಜನಸಂಖ್ಯೆಯ ಶೇಕಡಾ 50 ಕ್ಕಿಂತ ಕಡಿಮೆ ಮೊದಲ ಡೋಸ್ ಪಡೆದ ದೇಶದ 48 ಜಿಲ್ಲೆಗಳನ್ನು ಗುರುತಿಸಲಾಗಿದೆ ಎಂದು ಮಾಂಡವಿಯಾ ಹೇಳಿದರು.
ಈ ಅಭಿಯಾನದ ಅಡಿಯಲ್ಲಿ, ಕೋವಿಡ್-19 ಲಸಿಕೆ ಅಭಿಯಾನವನ್ನು ವೇಗಗೊಳಿಸಲು ಗಮನಹರಿಸಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.