ಬೆಂಗಳೂರು: ಇಂದು ಕರ್ನಾಟಕದಾದ್ಯಂತ ಲಕ್ಷಾಂತರ ಜನರು ಏಕಕಾಲದಲ್ಲಿ ಕನ್ನಡ ಗೀತಗಾಯನ ನಡೆಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಯೋಜನೆ ಮಾಡಿರುವ ಒಂದು ವಾರಗಳ ‘ಕನ್ನಡಕ್ಕಾಗಿ ನಾವು ಅಭಿಯಾನ’ದ ಭಾಗವಾಗಿ ಈ ಗೀತಗಾಯನ ಕಾರ್ಯಕ್ರಮ ನೆರವೇರಿದೆ.
5 ಲಕ್ಷಕ್ಕೂ ಹೆಚ್ಚು ಮಂದಿ ಗೀತ ಗಾಯನದಲ್ಲಿ ಭಾಗವಹಿಸುವ ಮೂಲಕ ನೂತನ ದಾಖಲೆ ಬರೆದಿದ್ದಾರೆ. ಸುಮಾರು 1,000ಕ್ಕೂ ಅಧಿಕ ಸ್ಥಳಗಳಲ್ಲಿ ಗೀತಗಾಯನ ಕಾರ್ಯಕ್ರಮ ನೆರವೇರಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹುಬ್ಬಳ್ಳಿಯ ಕನ್ನಡ ಭವನದಲ್ಲಿ ಲಕ್ಷ ಕಂಠಗಳ ಗೀತ ಗಾಯನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಗೀತ ಗಾಯನದ ಭಾಗವಾಗಿ ವಿಧಾನಸೌಧದ ಹೊರಗಡೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ಸುನಿಲ್ ನಾಯಕ್ ಮತ್ತು ಐಎಎಸ್, ಐಪಿಎಸ್ ಅಧಿಕಾರಿಗಳು ಸೇರಿದಂತೆ ಹಲವರು ‘ಹುಟ್ಟಿದರೆ ಕನ್ನಡ ನಾಡಲಿ ಹುಟ್ಟಬೇಕು’ ಸುಪ್ರಸಿದ್ಧ ಕನ್ನಡ ಹಾಡನ್ನು ಹಾಡಿದರು.
ಬೆಂಗಳೂರಿನ ಪುರಭವನ, ರವೀಂದ್ರ ಕಲಾಕ್ಷೇತ್ರ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ಕಛೇರಿಗಳು, ರೈಲು ನಿಲ್ದಾಣಗಳು, ಖಾಸಗಿ ಸಂಸ್ಥೆಗಳು, ಶಾಲಾ ಕಾಲೇಜುಗಳಲ್ಲಿ ಕೂಡ ಗೀತಗಾಯನ ಕಾರ್ಯಕ್ರಮ ನೆರವೇರಿದೆ.
ಬಾರಿಸು ಕನ್ನಡ ಡಿಂಡಿಮವ, ಜೋಗದ ಸಿರಿ ಬೆಳಕಿನಲ್ಲಿ, ಹುಟ್ಟಿದರೆ ಕನ್ನಡನಾಡಲ್ಲಿ ಹುಟ್ಟಬೇಕು ಮುಂತಾದ ಹಾಡುಗಳನ್ನು ಗೀತ ಗಾಯನ ಕಾರ್ಯಕ್ರಮದ ಸಂದರ್ಭದಲ್ಲಿ ಹಾಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.