ನವದೆಹಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ನಿನ್ನೆ ಸಂಜೆ ಗುಜರಾತ್ನ ಭವನಗರದಲ್ಲಿ ಆರ್ಥಿಕವಾಗಿ ದುರ್ಬಲ ವರ್ಗದವರಿಗಾಗಿನ ವಸತಿ ಯೋಜನೆಯನ್ನು ಉದ್ಘಾಟಿಸಿದರು. ಅವರು ಹಲವಾರು ಫಲಾನುಭವಿಗಳಿಗೆ ಫ್ಲಾಟ್ಗಳ ಕೀಗಳನ್ನು ಹಸ್ತಾಂತರಿಸಿದರು.
ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಭಾವನಗರ ಮುನ್ಸಿಪಲ್ ಕಾರ್ಪೊರೇಷನ್ ಒಟ್ಟು 1088 ಕೈಗೆಟುಕುವ ದರದ ಮನೆಗಳನ್ನು ನಿರ್ಮಿಸಿದೆ.
62.97 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಒಂದು ಕೋಣೆ, ಹಾಲ್, ಅಡುಗೆ ಮನೆ ಹೊಂದಿರುವ ಮನೆಗಳನ್ನು ನಿರ್ಮಿಸಲಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ರಾಷ್ಟ್ರಪತಿ ಕೋವಿಂದ್, ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ವಸತಿ ಯೋಜನೆಗಳನ್ನು ಸಕಾಲದಲ್ಲಿ ಪೂರ್ಣಗೊಳಿಸಿರುವುದಕ್ಕೆ ಸಂತೃಪ್ತಿ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಗುಜರಾತ್ ರಾಜ್ಯಪಾಲ ಆಚಾರ್ಯ ದೇವವ್ರತ್, ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ರಾಜ್ಯ ಶಿಕ್ಷಣ ಸಚಿವ ಜಿತುಭಾಯ್ ವಘಾನಿ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.
ಇದಕ್ಕೂ ಮುನ್ನ ರಾಷ್ಟ್ರಪತಿ ಕೋವಿಂದ್ ಅವರು ಭಾವನಗರ ಜಿಲ್ಲೆಯ ಮಹುವ ತಾಲೂಕಿನ ತಲಗಜರಡಾ ಗ್ರಾಮಕ್ಕೆ ತೆರಳಿ ಶ್ರೀ ಮೊರಾರಿ ಬಾಪು ಅವರ ಆಶ್ರಮವಾದ ಚಿತ್ರಕುಟ್ಧಾಮಕ್ಕೆ ಭೇಟಿ ನೀಡಿದರು. 3 ದಿನಗಳ ಗುಜರಾತ್ ಪ್ರವಾಸದ ನಂತರ ಕೋವಿಂದ್ ಇಂದು ದೆಹಲಿಗೆ ಮರಳಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.