ನವದೆಹಲಿ: ಭಾರತದ ಮೊದಲ ಮಾನವಸಹಿತ ಸಾಗರ ಮಿಷನ್ ‘ಸಮುದ್ರಯಾನ’ಕ್ಕೆ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ಚೆನ್ನೈನಲ್ಲಿ ಚಾಲನೆ ನೀಡಿದ್ದಾರೆ.
ಈ ಮಿಷನ್ ಮೂಲಕ ಭಾರತವು ಸಮುದ್ರಯಾನ ಚಟುವಟಿಕೆಗಳನ್ನು ಕೈಗೊಳ್ಳಲು ನೀರೊಳಗಿನ ವಾಹನಗಳನ್ನು ಹೊಂದಿರುವ ರಾಷ್ಟ್ರಗಳ ಗಣ್ಯ ಕ್ಲಬ್ಗೆ ಸೇರಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, “ಭಾರತವು ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಭಾರಿ ಪ್ರಗತಿಯನ್ನು ಸಾಧಿಸಿದೆ. ಗಗನಯಾನದ ಕಾರ್ಯಕ್ರಮದ ಭಾಗವಾಗಿ ಭಾರತೀಯ ಬಾಹ್ಯಾಕಾಶಕ್ಕೆ ಹೋಗುತ್ತಿದ್ದಾನೆ, ಮತ್ತೊಂದೆಡೆ ಸಮುದ್ರದ ಆಳಕ್ಕೆ ಧುಮುಕುತ್ತಿದ್ದಾನೆ” ಎಂದಿದ್ದಾರೆ.
ಸಚಿವರು ಟ್ವೀಟ್ ಮಾಡಿ, “ಭಾರತದ ಮೊದಲ ಮಾನವಸಹಿತ ಸಾಗರ ಮಿಷನ್ ಸಮುದ್ರಯಾನ್ ಅನ್ನು ಚೆನ್ನೈನಲ್ಲಿ ಪ್ರಾರಂಭಿಸಲಾಯಿತು. ಭಾರತವು ನೀರೊಳಗಿನ ಇಳಿಯುವ ವಾಹನಗಳನ್ನು ಹೊಂದಿರುವ ಆಯ್ದ ರಾಷ್ಟ್ರಗಳಾದ ಅಮೆರಿಕ, ರಷ್ಯಾ, ಜಪಾನ್, ಫ್ರಾನ್ಸ್ ಮತ್ತು ಚೀನಾದ ಗಣ್ಯ ಕ್ಲಬ್ಗೆ ಸೇರಿದೆ. ಕುಡಿಯುವ ನೀರಿಗಾಗಿ, ಶುದ್ಧ ಶಕ್ತಿ ಮತ್ತು ನೀಲಿ ಆರ್ಥಿಕತೆಗಾಗಿ ಸಮುದ್ರ ಸಂಪನ್ಮೂಲಗಳನ್ನು ಅನ್ವೇಷಿಸುವಲ್ಲಿ ಹೊಸ ಅಧ್ಯಾಯವನ್ನು ತೆರೆದಿದೆ” ಎಂದಿದ್ದಾರೆ.
Launched India’s First Manned Ocean Mission #Samudrayan at #Chennai. India joins elite club of select nations USA, Russia, Japan,France & China having such underwater vehicles.A new chapter opens to explore ocean resources for drinking water, clean energy & blue economy. pic.twitter.com/FArZULj4NB
— Dr Jitendra Singh (@DrJitendraSingh) October 29, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.