ನವದೆಹಲಿ: ಅಕ್ಟೋಬರ್ 30 ರಂದು ಉಪಚುನಾವಣೆ ನಡೆದ ಮೂರು ಲೋಕಸಭೆ ಮತ್ತು 29 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯ ಇಂದು ಪ್ರಾರಂಭವಾಗಿದೆ.
13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶವಾದ ದಾದ್ರಾ ಮತ್ತು ನಗರ್ ಹವೇಲಿಯಲ್ಲಿ ಉಪಚುನಾವಣೆ ನಡೆದಿತ್ತು.
ಉಪಚುನಾವಣೆ ನಡೆದ ಲೋಕಸಭಾ ಸ್ಥಾನಗಳೆಂದರೆ ಮಧ್ಯಪ್ರದೇಶದ ಖಾಂಡ್ವಾ, ಹಿಮಾಚಲ ಪ್ರದೇಶದ ಮಂಡಿ ಮತ್ತು ದಾದ್ರಾ ಮತ್ತು ನಗರ ಹವೇಲಿ. ಹಾಲಿ ಸಂಸದರ ನಿಧನದಿಂದ ಈ ಎಲ್ಲಾ ಮೂರು ಲೋಕಸಭಾ ಸ್ಥಾನಗಳು ತೆರವಾಗಿದ್ದವು.
ಅಸ್ಸಾಂ, ಪಶ್ಚಿಮ ಬಂಗಾಳ, ಮಧ್ಯಪ್ರದೇಶ, ಹಿಮಾಚಲ ಪ್ರದೇಶ, ಬಿಹಾರ, ಕರ್ನಾಟಕ, ಹರಿಯಾಣ ಮತ್ತು ಮಹಾರಾಷ್ಟ್ರ ಸೇರಿದಂತೆ 13 ರಾಜ್ಯಗಳಲ್ಲಿ 29 ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆ ನಡೆದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.