ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರನ್ನು 12 ಗಂಟೆಗಳ ಕಾಲ ವಿಚಾರಣೆ ನಡೆಸಿದ ನಂತರ ಜಾರಿ ನಿರ್ದೇಶನಾಲಯ (ಇಡಿ) ಸೋಮವಾರ ತಡರಾತ್ರಿ ರಾತ್ರಿ ಬಂಧಿಸಿದೆ.
ಮಹಾರಾಷ್ಟ್ರದ ಮಾಜಿ ಸಚಿವರು ತಮ್ಮ ವಿರುದ್ಧ ದಾಖಲಾದ ಹಣಕಾಸು ವಂಚನೆ ಪ್ರಕರಣದಲ್ಲಿ ಏಜೆನ್ಸಿಯ ಸಮನ್ಸ್ ರದ್ದುಗೊಳಿಸುವಂತೆ ಮಾಡಿದ ಮನವಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿದ ಮೂರು ದಿನಗಳ ನಂತರ ಅವರು ತನ್ನ ಹೇಳಿಕೆಯನ್ನು ದಾಖಲಿಸಲು ಇಡಿ ಮುಂದೆ ಹಾಜರಾಗಿದ್ದರು.
ದೇಶ್ಮುಖ್ ತಿಂಗಳುಗಳ ಕಾಲ ಇಡಿ ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿದ್ದರು. ದೇಶ್ಮುಖ್ರನ್ನು ಪತ್ತೆಹಚ್ಚಲು ಇಡಿ ಕಳೆದ ಕೆಲವು ತಿಂಗಳುಗಳಲ್ಲಿ ಹಲವು ಸ್ಥಳಗಳಲ್ಲಿ ದಾಳಿ ನಡೆಸಿತ್ತು, ಆದರೆ ಸಿಕ್ಕಿರಲಿಲ್ಲ.
ಸೋಮವಾರ ಮಧ್ಯಾಹ್ನ ಮುಂಬೈನ ಬಲ್ಲಾರ್ಡ್ ಎಸ್ಟೇಟ್ನಲ್ಲಿರುವ ಇಡಿ ಕಚೇರಿಗೆ ದೇಶಮುಖ್ ಆಗಮಿಸಿದ ನಂತರ, ತನಿಖಾಧಿಕಾರಿಯು ಅವರನ್ನು ವಿಚಾರಣೆ ನಡೆಸಿದ್ದಾರೆ.
ಇದಕ್ಕೂ ಮೊದಲು, ದೇಶಮುಖ್ ಮತ್ತು ಅವರ ಮಗ ಹೃಷಿಕೇಶ್ಗೆ ಹಣ ವರ್ಗಾವಣೆಗೆ ಸಹಾಯ ಮಾಡಿದ ಆರೋಪದಡಿ ದೇಶಮುಖ್ ಅವರ ಖಾಸಗಿ ಕಾರ್ಯದರ್ಶಿ ಸಂಜೀವ್ ಪಲಾಂಡೆ ಮತ್ತು ಆಪ್ತ ಸಹಾಯಕ ಕುಂದನ್ ಶಿಂಧೆ ಅವರನ್ನು ಏಜೆನ್ಸಿ ಬಂಧಿಸಿತ್ತು.
ಇಡಿ ಪ್ರಕಾರ, ದೇಶಮುಖ್ ಅವರು ಸಹಾಯಕ ಪೊಲೀಸ್ ಇನ್ಸ್ಪೆಕ್ಟರ್ ಸಚಿನ್ ವಾಜ್ ಅವರಿಂದ 4.7 ಕೋಟಿ ರೂಪಾಯಿಗಳನ್ನು ನಗದು ರೂಪದಲ್ಲಿ ಸಂಗ್ರಹಿಸಿದ್ದರು. ವಾಝೆ ಆಗ ಮುಂಬೈ ಪೊಲೀಸ್ನ ಸಿಐಯು ಶಾಖೆಯ ಮುಖ್ಯಸ್ಥರಾಗಿದ್ದರು ಮತ್ತು ದೇಶಮುಖ್ಗಾಗಿ ಅಕ್ರಮವಾಗಿ ಮುಂಬೈನ ಆರ್ಕೆಸ್ಟ್ರಾ ಬಾರ್ ಮಾಲೀಕರಿಂದ ಹಣವನ್ನು ಸಂಗ್ರಹಿಸಿದ್ದರು ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.