ನವದೆಹಲಿ: ಸಾರ್ವಜನಿಕ ಸ್ಥಳಗಳಲ್ಲಿ ನಮಾಝ್ ಮಾಡುವ ವಿರುದ್ಧ ಆಕ್ರೋಶಗಳು ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹರಿಯಾಣದ ಗುರುಗ್ರಾಮ್ ಆಡಳಿತವು ಮಂಗಳವಾರ 37 ಗೊತ್ತುಪಡಿಸಿದ ಸ್ಥಳಗಳ ಪೈಕಿ ಎಂಟರಲ್ಲಿ ನಮಾಜ್ ಮಾಡಲು ಅನುಮತಿಯನ್ನು ಹಿಂತೆಗೆದುಕೊಂಡಿದೆ.
ಜಿಲ್ಲಾಡಳಿತದ ಅಧಿಕೃತ ಹೇಳಿಕೆಯ ಪ್ರಕಾರ, ಸ್ಥಳೀಯ ಜನರು ಮತ್ತು ಆರ್ಡಬ್ಲ್ಯೂಎಯಿಂದ ಆಕ್ಷೇಪಣೆ ವ್ಯಕ್ತವಾದ ನಂತರ ಅನುಮತಿಯನ್ನು ರದ್ದುಗೊಳಿಸಲಾಗಿದೆ.
“ಯಾವುದೇ ಸಾರ್ವಜನಿಕ ಮತ್ತು ತೆರೆದ ಸ್ಥಳದಲ್ಲಿ ನಮಾಜ್ ಮಾಡಲು ಆಡಳಿತದ ಒಪ್ಪಿಗೆ ಅಗತ್ಯವಾಗಿದೆ. ಯಾವುದೇ ಮಸೀದಿ, ಈದ್ಗಾ ಅಥವಾ ಖಾಸಗಿ ಅಥವಾ ಗೊತ್ತುಪಡಿಸಿದ ಸ್ಥಳದಲ್ಲಿ ನಮಾಜ್ ಮಾಡಬಹುದು. ಆದರೆ ಇತರ ಸ್ಥಳಗಳಲ್ಲಿ ನಮಾಝ್ ಮಾಡಲು ಒಂದು ವೇಳೆ ಸ್ಥಳೀಯ ಜನರು ಆಕ್ಷೇಪಣೆಗಳನ್ನು ವ್ಯಕ್ತಪಡಿಸಿದರೆ ನಮಾಜ್ ಮಾಡಲು ಅನುಮತಿ ನೀಡಲಾಗುವುದಿಲ್ಲ” ಎಂದು ಆಡಳಿತ ಹೇಳಿದೆ.
ಯಾವುದೇ ರಸ್ತೆ, ಕ್ರಾಸಿಂಗ್ ಅಥವಾ ಸಾರ್ವಜನಿಕ ಸ್ಥಳದಲ್ಲಿ ನಮಾಜ್ ಮಾಡದಂತೆ ಖಚಿತಪಡಿಸಲು ಸಮಿತಿ ರಚಿಸಲಾಗಿದೆ. ಇದಲ್ಲದೆ, ಪ್ರಾರ್ಥನೆ ಸಲ್ಲಿಸಲು ಸ್ಥಳವನ್ನು ಗೊತ್ತುಪಡಿಸುವ ಸಮಯದಲ್ಲಿ ಸ್ಥಳೀಯರಿಂದ ಒಪ್ಪಿಗೆಯನ್ನು ತೆಗೆದುಕೊಳ್ಳುವುದನ್ನು ಕಡ್ಡಾಯ ಮಾಡಲಾಗಿದೆ.
ಗುರುಗ್ರಾಮ್ನಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಧಾರ್ಮಿಕ ಸಮುದಾಯಗಳಿಗೆ ಆಡಳಿತವು ಕರೆ ನೀಡಿದೆ. ಗುರುಗ್ರಾಮ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದು, ಪೊಲೀಸರು ಪರಿಸ್ಥಿತಿಯ ಮೇಲೆ ನಿಗಾ ಇರಿಸಿದ್ದಾರೆ.
ಈ ಹಿಂದೆ ಹಲವಾರು ಸಂದರ್ಭಗಳಲ್ಲಿ, ಗುರುಗ್ರಾಮ್ ನಿವಾಸಿಗಳು ಸಾರ್ವಜನಿಕ ಮೈದಾನದಲ್ಲಿ ಶುಕ್ರವಾರ ನಮಾಜ್ ಮಾಡುವ ವಿರುದ್ಧ ದೂರು ಮತ್ತು ಪ್ರತಿಭಟನೆ ನಡೆಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.