ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕ್ರಮವಾಗಿ ರೂ 5 ಮತ್ತು ರೂ 10 ರಷ್ಟು ಕಡಿತಗೊಳಿಸುವ ಕೇಂದ್ರದ ನಿರ್ಧಾರವು ದೀಪಾವಳಿಯ ಸಂದರ್ಭದಲ್ಲಿ ಜನರಲ್ಲಿ ತುಸು ನಿರಾಳತೆ ತಂದಿದೆ. ಕಳೆದ ಹಲವಾರು ವಾರಗಳಿಂದ ನಿರಂತರ ಇಂಧನ ಬೆಲೆ ಏರಿಕೆಯಾಗುತ್ತಿರುವುದು ಆತಂಕವನ್ನು ಸೃಷ್ಟಿ ಮಾಡಿತ್ತು.
ಕೇಂದ್ರ ಸರ್ಕಾರದ ಈ ಮಹತ್ವ ಕ್ರಮಕ್ಕೆ ಬಿಜೆಪಿ ನಾಯಕರುಗಳು ಹರ್ಷ ವ್ಯಕ್ತಪಡಿಸಿದ್ದಾರೆ.
ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡುವ ನಿರ್ಧಾರ ತೆಗೆದುಕೊಂಡ ಪ್ರಧಾನಿ ನರೇಂದ್ರ ಮೋದಿಯವರನ್ನು ಶ್ಲಾಘಿಸಿದರು ಮತ್ತು ಈ ಕ್ರಮವು ಸಾಮಾನ್ಯ ಜನರಿಗೆ ಪ್ರಯೋಜನವನ್ನು ನೀಡುತ್ತದೆ, ಇಂಧನ ಬಳಕೆಯನ್ನು ಇನ್ನಷ್ಟು ಹೆಚ್ಚಿಸುತ್ತದೆ ಮತ್ತು ನಮ್ಮ ಆರ್ಥಿಕತೆಯನ್ನು ಉತ್ತೇಜಿಸುತ್ತದೆ ಎಂದು ಹೇಳಿದರು.
ಬಿಜೆಪಿ ರಾಷ್ಟೀಯ ಅಧ್ಯಕ್ಷ ನಡ್ಡಾ ಟ್ವಿಟ್ ಮಾಡಿ, ಈ ನಿರ್ಧಾರವು ಬಳಕೆಯನ್ನು ಹೆಚ್ಚಿಸುತ್ತದೆ ಮತ್ತು ಹಣದುಬ್ಬರವನ್ನು ಕಡಿಮೆ ಮಾಡುತ್ತದೆ. ಇದರಿಂದ ಬಡ ಮತ್ತು ಮಧ್ಯಮ ವರ್ಗಗಳಿಗೆ ಸಹಾಯವಾಗುತ್ತದೆ ಎಂದಿದ್ದಾರೆ.
Big reason to cheer ahead of Diwali! 🪔
I thank PM @NarendraModi ji for the decision to reduce Excise Duty on Petrol & Diesel by ₹5 & ₹10 respectively.⛽
The move will benefit common people, further boost consumption & spur our economy.
— Piyush Goyal (@PiyushGoyal) November 3, 2021
ಶ್ರೀ @narendramodi ಅವರ ನೇತೃತ್ವದ ಕೇಂದ್ರ ಸರಕಾರ ಡೀಸಲ್ ಮೇಲೆ 10 ರೂ ಹಾಗೂ ಪೆಟ್ರೋಲ್ 05 ರೂ ಕಡಿಮೆ ಗೊಳಿಸಿದ್ದು ಸ್ವಾಗತಾರ್ಹ ಜನರಿಗೆ ದೀಪಾವಳಿಯ ಉಡಗೊರೆ ಕೊಟ್ಟಿದ್ದಾರೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು,
1/3— Basavaraj S Bommai (@BSBommai) November 3, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.