ನವದೆಹಲಿ: ಮಾಜಿ ಉಪಪ್ರಧಾನಿ, ಬಿಜೆಪಿಯ ಭೀಷ್ಮ ಎಂದೇ ಪರಿಗಣಿಸಲ್ಪಟ್ಟಿರುವ ಎಲ್ ಕೆ ಅಡ್ವಾಣಿ ಇಂದು 94ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಸಂದರ್ಭದಲ್ಲಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರುಗಳಿಂದ ಶುಭಾಶಯಗಳ ಮಹಾಪೂರ ಹರಿದು ಬಂದಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಅಡ್ವಾಣಿ ಅವರ ನಿವಾಸಕ್ಕೆ ತೆರಳಿ ಅವರಿಗೆ ಜನ್ಮದಿನದ ಶುಭಾಶಯಗಳನ್ನು ತಿಳಿಸಿದ್ದಾರೆ ಮತ್ತು ಅವರಿಂದ ಆಶೀರ್ವಾದ ಪಡೆದು ಕೊಂಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ, “ಗೌರವಾನ್ವಿತ ಅಡ್ವಾಣಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಅವರ ದೀರ್ಘ ಮತ್ತು ಆರೋಗ್ಯಪೂರ್ಣ ಜೀವನಕ್ಕಾಗಿ ಪ್ರಾರ್ಥಿಸುತ್ತೇನೆ. ಜನರ ಸಬಲೀಕರಣ ಮತ್ತು ಸಾಂಸ್ಕೃತಿಕ ಹೆಮ್ಮೆಯನ್ನು ವೃದ್ಧಿಸುವಲ್ಲಿ ಅವರ ಅಪಾರ ಕೊಡುಗೆಗೆ ಈ ದೇಶ ಚಿರಋಣಿಯಾಗಿದೆ. ಅವರ ಪಾಂಡಿತ್ಯ ಮತ್ತು ಶ್ರೀಮಂತ ಜ್ಞಾನಕ್ಕಾಗಿ ಅವರು ವ್ಯಾಪಕವಾಗಿ ಗೌರವಿಸಲ್ಪಡುತ್ತಿದ್ದಾರೆ” ಎಂದಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೀಪಿನ ಅವರು ಕೂಡ ಎಲ್ ಕೆ ಅಡ್ವಾಣಿ ಅವರಿಗೆ ಜನ್ಮದಿನದ ಶುಭಾಶಯಗಳನ್ನು ತಿಳಿಸಿದ್ದು, ಪಕ್ಷವನ್ನು ಜನರ ಬಳಿಗೆ ತಲುಪಿಸುವಲ್ಲಿ ಅಡ್ವಾನಿ ಮಹತ್ವದ ಕಾರ್ಯ ನಿರ್ವಹಿಸಿದ್ದಾರೆ ಮತ್ತು ದೇಶದ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ ಎಂದಿದ್ದಾರೆ.
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಕೂಡ ಅಡ್ವಾಣಿ ಅವರು ಸ್ಪೂರ್ತಿದಾಯಕ ಮತ್ತು ಮಾರ್ಗದರ್ಶಿ ವ್ಯಕ್ತಿತ್ವ ಎಂದು ಶ್ಲಾಘಿಸಿದ್ದಾರೆ.
Birthday greetings to respected Advani Ji. Praying for his long and healthy life. The nation remains indebted to him for his numerous efforts towards empowering people and enhancing our cultural pride. He is also widely respected for his scholarly pursuits and rich intellect.
— Narendra Modi (@narendramodi) November 8, 2021
हम सबके प्रेरणास्रोत एवं मार्गदर्शक, श्रद्धेय लालकृष्ण आडवाणी जी को उनके जन्मदिवस की हार्दिक शुभकामनाएँ। वे भारत के उन सबसे सम्मानित नेताओं में गिने जाते हैं, जिनकी विद्वता, दूरदर्शिता, बौद्धिक क्षमता और राजनय का लोहा सभी मानते हैं। ईश्वर उन्हें स्वस्थ रखे एवं दीर्घायु करे।
— Rajnath Singh (@rajnathsingh) November 8, 2021
अपने सतत संघर्ष से @BJP4India की विचारधारा को जन-जन तक पहुँचाकर संगठन को अखिल भारतीय स्वरूप देने में अपना अहम योगदान देने वाले हम सभी के आदरणीय श्रद्धेय श्री लालकृष्ण आडवाणी जी को जन्मदिन की हार्दिक शुभकामनाएं। आप सदैव स्वस्थ रहें और दीर्घायु हों ऐसी ईश्वर से कामना करता हूँ।
— Amit Shah (@AmitShah) November 8, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.