ನವದೆಹಲಿ: ಗುಜರಾತ್ ಕರಾವಳಿ ತೀರದಲ್ಲಿ ಪಾಕಿಸ್ಥಾನದ ಕಡಲ ಭದ್ರತಾ ಪಡೆ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಮಹಾರಾಷ್ಟ್ರದ ಮೀನುಗಾರರೊಬ್ಬರು ಶನಿವಾರ ಮೃತಪಟ್ಟಿದ್ದಾರೆ. ಭಾರತ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು ಕ್ರಮಕ್ಕೆ ಮುಂದಾಗಿದೆ.
ಮೂಲಗಳ ಪ್ರಕಾರ, ಭಾರತವು ಈ ವಿಷಯವನ್ನು ಪಾಕಿಸ್ಥಾನದ ಸರಕಾರದ ಬಳಿಗೆ ರಾಜತಾಂತ್ರಿಕ ಮಾರ್ಗಗಳ ಮೂಲಕ ಕೊಂಡೊಯ್ಯಲಿದೆ ಎನ್ನಲಾಗಿದೆ.
ಗುಜರಾತ್ ಕರಾವಳಿಯಲ್ಲಿ ‘ಜಲ್ಪುರಿ’ ಎಂಬ ಮೀನುಗಾರಿಕಾ ದೋಣಿಯ ಮೇಲೆ ಪಾಕಿಸ್ಥಾನದ ಭದ್ರತಾ ಪಡೆ ಸಿಬ್ಬಂದಿ ದಾಳಿ ನಡೆಸಿದ್ದಾರೆ. ಈ ದಾಳಿಗೆ 32 ವರ್ಷದ ಶ್ರೀಧರ್ ರಮೇಶ್ ಚಾಮ್ರೆ ಎಂಬ ಮೀನುಗಾರ ಮೃತಪಟ್ಟಿದ್ದಾರೆ. ಮತ್ತೊಬ್ಬರಿಗೆ ಗಾಯವಾಗಿದೆ.
ಆದರೆ ಪಾಕಿಸ್ಥಾನ ಮಾತ್ರ ಈ ಘಟನೆಯನ್ನು ಸಮರ್ಥನೆ ಮಾಡಿಕೊಂಡಿದ್ದು, ಭಾರತದ ಮೀನುಗಾರಿಕಾ ದೋಣಿ ಪಾಕಿಸ್ಥಾನದ ಜಲ ಪ್ರದೇಶವನ್ನು ಅಕ್ರಮವಾಗಿ ಪ್ರವೇಶ ಮಾಡಿತ್ತು ಎಂದು ಹೇಳಿದೆ.
ಅಲ್ಲದೆ ದೋಣಿಯಲ್ಲಿದ್ದ ಇತರ ಆರು ಭಾರತೀಯರನ್ನು ಬಂಧಿಸಿದ್ದೇವೆ ಎಂದು ಪಾಕಿಸ್ಥಾನ ಹೇಳಿದೆ. ಆದರೆ ಭಾರತ ಸರ್ಕಾರ ಈ ವಿಷಯವನ್ನು ದೃಢಪಡಿಸಿಲ್ಲ.
“ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಈ ಬಗ್ಗೆ ಪಾಕಿಸ್ಥಾನದೊಂದಿಗೆ ರಾಜತಾಂತ್ರಿಕವಾಗಿ ಚರ್ಚೆ ನಡೆಸುತ್ತೇವೆ. ಪ್ರಕರಣದ ತನಿಖೆ ನಡೆಯುತ್ತಿದೆ” ಎಂದು ಕೇಂದ್ರ ಸರಕಾರದ ಅಧಿಕಾರಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.