ನವದೆಹಲಿ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ನಿನ್ನೆ ಆಯೋಜಿಸಿದ್ದ ಅಫ್ಘಾನಿಸ್ಥಾನ ಕುರಿತು ಪ್ರಾದೇಶಿಕ ಭದ್ರತಾ ಸಂವಾದಕ್ಕಾಗಿ ದೆಹಲಿಗೆ ಬಂದಿರುವ ಏಳು ರಾಷ್ಟ್ರಗಳ ರಾಷ್ಟ್ರೀಯ ಭದ್ರತಾ ಮಂಡಳಿಗಳ ಮುಖ್ಯಸ್ಥರು ಸಂವಾದ ಮುಗಿದ ನಂತರ ಒಟ್ಟಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಇರಾನ್, ಕಝಾಕಿಸ್ಥಾನ್, ಕಿರ್ಗಿಸ್ಥಾನ್, ರಷ್ಯಾ, ತಜಕಿಸ್ಥಾನ್, ತುರ್ಕಮೆನಿಸ್ಥಾನ್ ಮತ್ತು ಉಜ್ಬೇಕಿಸ್ಥಾನ್ ಅನ್ನು ಪ್ರತಿನಿಧಿಸಿದ ಹಿರಿಯ ಭದ್ರತಾ ಅಧಿಕಾರಿಗಳು ಸಂವಾದವನ್ನು ಆಯೋಜಿಸುವಲ್ಲಿ ಭಾರತದ ಉಪಕ್ರಮ ಮತ್ತು ವಿಚಾರ ವಿನಿಮಯದ ಗುಣಮಟ್ಟದ ಬಗ್ಗೆ ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಅವರು ಅಫ್ಘಾನ್ ಪರಿಸ್ಥಿತಿಯ ಬಗ್ಗೆ ತಮ್ಮ ದೃಷ್ಟಿಕೋನಗಳನ್ನು ಕೂಡ ತಿಳಿಸಿದರು ಎಂದು ಮೂಲಗಳು ತಿಳಿಸಿವೆ.
ಸಾಂಕ್ರಾಮಿಕ ರೋಗವು ಎದುರಿಸುತ್ತಿರುವ ಸವಾಲುಗಳ ನಡುವೆಯೂ ದೆಹಲಿ ಭದ್ರತಾ ಸಂವಾದದಲ್ಲಿ ಹಿರಿಯ ಗಣ್ಯರು ಭಾಗವಹಿಸಿದ್ದನ್ನು ಪ್ರಧಾನಮಂತ್ರಿ ಶ್ಲಾಘಿಸಿದರು.
ಅಫ್ಘಾನಿಸ್ಥಾನ ಬಿಕ್ಕಟ್ಟು ಎದುರಿಸುತ್ತಿರುವ ಈ ಸಂದರ್ಭದಲ್ಲಿ, ಸಮಗ್ರ ಸರ್ಕಾರದ ಅಗತ್ಯತೆ, ಭಯೋತ್ಪಾದಕ ಗುಂಪುಗಳು ಬಳಸುತ್ತಿರುವ ಅಫ್ಘಾನ್ ಭೂಪ್ರದೇಶದ ಬಗ್ಗೆ ಶೂನ್ಯ ಸಹಿಷ್ಣುತೆಯ ನಿಲುವು, ಮಾದಕವಸ್ತುಗಳ ಕಳ್ಳಸಾಗಣೆಯನ್ನು ಎದುರಿಸುವ ತಂತ್ರ, ಅಫ್ಘಾನಿಸ್ಥಾನದಿಂದ ಹೊಎ ಬರುತ್ತಿರುವ ಶಸ್ತ್ರಾಸ್ತ್ರಗಳು, ಮತ್ತು ಅಫ್ಘಾನಿಸ್ಥಾನದಲ್ಲಿ ಹೆಚ್ಚುತ್ತಿರುವ ನಿರ್ಣಾಯಕ ಮಾನವೀಯ ಬಿಕ್ಕಟ್ಟನ್ನು ಪರಿಹರಿಸುವುದು ಗಮನಹರಿಸಬೇಕಾದ ಅಂಶಗಳಾಗಿವೆ ಎಂದಿದ್ದಾರೆ.
ಪ್ರಾದೇಶಿಕ ಭದ್ರತಾ ಸಂವಾದವು ಮಧ್ಯ ಏಷ್ಯಾದ ಮಧ್ಯಮ ಮತ್ತು ಪ್ರಗತಿಶೀಲ ಸಂಸ್ಕೃತಿಯ ಸಂಪ್ರದಾಯಗಳನ್ನು ಪುನರುಜ್ಜೀವನಗೊಳಿಸಲು ಮತ್ತು ಉಗ್ರಗಾಮಿ ಪ್ರವೃತ್ತಿಯನ್ನು ಎದುರಿಸಲು ಕೆಲಸ ಮಾಡುತ್ತದೆ ಎಂಬ ಭರವಸೆಯನ್ನು ಮೋದಿ ವ್ಯಕ್ತಪಡಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.