ನವದೆಹಲಿ: ಭಾರತೀಯ ಹತ್ತಿ ಆಯೋಗಕ್ಕೆ 17,408 ಕೋಟಿ ರೂಪಾಯಿಗಳ ಬೆಂಬಲ ಬೆಲೆ ನೀಡಲು ಬುಧವಾರ ಕೇಂದ್ರ ಸಂಪುಟದ ಅನುಮೋದನೆ ಸಿಕ್ಕಿದೆ.
ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಈ ಬಗ್ಗೆ ಮಾಹಿತಿ ನೀಡಿ, 2014-15ರ ಅಕ್ಟೋಬರ್ನಿಂದ 2020-21ರ ಸೆಪ್ಟೆಂಬರ್ ಅವಧಿಯಲ್ಲಿ ಹತ್ತಿಗೆ ಎಮ್ಎಸ್ಪಿ ಕಾರ್ಯಾಚರಣೆಗಳ ಅಡಿಯಲ್ಲಿ ನಷ್ಟವನ್ನು ಮರುಪಾವತಿಸಲು ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಅನುಮೋದನೆ ಎಂದಿದ್ದಾರೆ.
2021-22ನೇ ಸಾಲಿಗೆ ಸೆಣಬಿನ ಪ್ಯಾಕೇಜಿಂಗ್ ಮೆಟೀರಿಯಲ್ಗಳ ಮೀಸಲಾತಿ ಮಾನದಂಡಗಳನ್ನು ಸಹ ಸಂಪುಟ ಅನುಮೋದಿಸಿದೆ ಎಂದು ಸಚಿವರು ಹೇಳಿದ್ದಾರೆ.
ಇದರಡಿ 100% ಆಹಾರ ಧಾನ್ಯಗಳು ಮತ್ತು 20% ಸಕ್ಕರೆಯನ್ನು ಸೆಣಬಿನ ಚೀಲಗಳಲ್ಲಿ ಪ್ಯಾಕ್ ಮಾಡಬೇಕಾಗುತ್ತದೆ. ಈ ಕ್ರಮವು ಸೆಣಬಿನ ಗಿರಣಿಗಳು ಮತ್ತು ಪೂರಕ ಘಟಕಗಳಲ್ಲಿ ಕೆಲಸ ಮಾಡುತ್ತಿರುವ 3.7 ಲಕ್ಷ ಕಾರ್ಮಿಕರಿಗೆ ಪ್ರಯೋಜನ ನೀಡುತ್ತದೆ ಮತ್ತು ಇದು ಸುಮಾರು ನಾಲ್ಕು ಮಿಲಿಯನ್ ಕೃಷಿ ಕುಟುಂಬಗಳ ಜೀವನೋಪಾಯವನ್ನು ಬೆಂಬಲಿಸುತ್ತದೆ ಮತ್ತು ಪರಿಸರವನ್ನು ರಕ್ಷಿಸಲು ಸಹಾಯ ಮಾಡುತ್ತದೆ ಎಂದಿದ್ದಾರೆ.
ಎಥೆನಾಲ್ ಮಿಶ್ರಿತ ಪೆಟ್ರೋಲ್ ಕಾರ್ಯಕ್ರಮದ ಅಡಿಯಲ್ಲಿ ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳಿಂದ ಎಥೆನಾಲ್ ಅನ್ನು ಸಂಗ್ರಹಿಸಲು ಸಂಪುಟ ಅನುಮೋದಿಸಿದೆ. .
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.