ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಿನ್ನೆ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಈ ಹಣಕಾಸು ವರ್ಷದ ಉಳಿದ ಭಾಗದಲ್ಲಿ ಮತ್ತು 2025-26ನೇ ಹಣಕಾಸು ವರ್ಷದವರೆಗೆ ಅಂದರೆ 15ನೇ ಹಣಕಾಸು ಆಯೋಗದ ಅವಧಿಯವರೆಗೆ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಮರು ಸ್ಥಾಪನೆ ಮತ್ತು ಮುಂದುವರಿಕೆಗೆ ಅನುಮೋದನೆ ನೀಡಿದೆ.
ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಕೇಂದ್ರ ವಲಯದ ಯೋಜನೆಯಾಗಿದ್ದು, ಇದಕ್ಕೆ ಭಾರತ ಸರ್ಕಾರದಿಂದ ಸಂಪೂರ್ಣವಾಗಿ ಧನಸಹಾಯ ನೀಡಲಾಗುತ್ತದೆ. ಕುಡಿಯುವ ನೀರು, ಪ್ರಾಥಮಿಕ ಶಿಕ್ಷಣ, ಸಾರ್ವಜನಿಕ ಆರೋಗ್ಯ, ನೈರ್ಮಲ್ಯ ಮತ್ತು ರಸ್ತೆಗಳು ಮುಂತಾದ ಕ್ಷೇತ್ರಗಳಲ್ಲಿ ದೀರ್ಘಕಾಲ ಬಾಳಿಕೆ ಬರುವ ಸಾಮುದಾಯಿಕ ಸ್ವತ್ತುಗಳ ಸೃಷ್ಟಿಗೆ ಒತ್ತು ನೀಡುವ ಅಭಿವೃದ್ಧಿ ಸ್ವರೂಪದ ಕೆಲಸಗಳನ್ನು ಶಿಫಾರಸು ಮಾಡಲು ಸಂಸದರಿಗೆ ಅನುವು ಮಾಡಿಕೊಡುವುದು ಈ ಯೋಜನೆಯ ಉದ್ದೇಶವಾಗಿದೆ.
ಪ್ರತಿ ಸಂಸದರ ಕ್ಷೇತ್ರಕ್ಕೆ ವಾರ್ಷಿಕ ಈ ಯೋಜನೆ ನಿಧಿಯು 5 ಕೋಟಿ ರೂ.ಗಳಾಗಿರುತ್ತದೆ, ತಲಾ 2.5 ಕೋಟಿ ರೂ.ಗಳ ಎರಡು ಕಂತುಗಳಲ್ಲಿ ಹಣ ಬಿಡುಗಡೆ ಮಾಡಲಾಗುತ್ತದೆ.
ಸಮಾಜದಲ್ಲಿ ಕೋವಿಡ್ -19ರ ಆರೋಗ್ಯ ಮತ್ತು ಪ್ರತಿಕೂಲ ಪರಿಣಾಮಗಳನ್ನು ನಿರ್ವಹಿಸಲು, 2020-21 ಮತ್ತು 2021-22 ನೇ ಹಣಕಾಸು ವರ್ಷದಲ್ಲಿ ಯೋಜನೆಯನ್ನು ನಿರ್ವಹಿಸದಿರಲು ಮತ್ತು ಕೋವಿಡ್ -19 ಸಾಂಕ್ರಾಮಿಕದ ಪರಿಣಾಮಗಳನ್ನು ನಿರ್ವಹಿಸಲು ಹಣಕಾಸು ಸಚಿವಾಲಯದ ಬಳಿ ಇದರ ನಿಧಿ ಇಟ್ಟುಕೊಳ್ಳಲು ಸಂಪುಟವು 2020ರ ಏಪ್ರಿಲ್ 6 ರಂದು ನಡೆದ ಸಭೆಯಲ್ಲಿ ನಿರ್ಧರಿಸಿತ್ತು.
ದೇಶವು ಈಗ ಆರ್ಥಿಕ ಚೇತರಿಕೆಯ ಹಾದಿಯಲ್ಲಿರುವುದರಿಂದ ಮತ್ತು ಈ ಯೋಜನೆಯು ಬಾಳಿಕೆ ಬರುವ ಸಾಮುದಾಯಿಕ ಸ್ವತ್ತುಗಳ ಸೃಷ್ಟಿಗೆ ಪ್ರಯೋಜನಕಾರಿಯಾಗಿರುವುದರಿಂದ, ಸಮುದಾಯದ ಸ್ಥಳೀಯವಾಗಿ ಅಗತ್ಯವೆಂದು ಭಾವಿಸಲಾದ ಆಕಾಂಕ್ಷೆಗಳನ್ನು ಪೂರೈಸುವಲ್ಲಿ, ದೇಶಾದ್ಯಂತ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗಗಳ ಸೃಷ್ಟಿಗೆ ಸಹಕಾರಿಯಾಗಿ ಆ ಮೂಲಕ ಆತ್ಮ ನಿರ್ಭರ ಭಾರತದ ಉದ್ದೇಶವನ್ನು ಸಾಧಿಸಲು ಸಹಕಾರಿಯಾಗಿರುವುದರಿಂದ ಕೇಂದ್ರ ಸಚಿವ ಸಂಪುಟವು ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯನ್ನು 15ನೇ ಹಣಕಾಸು ಆಯೋಗದ ಅವಧಿಯವರೆಗೆ ಅಂದರೆ 2025-26ರವರೆಗೆ ಮುಂದುವರಿಸಲು ನಿರ್ಧರಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.