ನವದೆಹಲಿ: ಭಾರತೀಯ ವಿಮಾನ ನಿಲ್ದಾಣಗಳಲ್ಲಿ ಬಂದಿಳಿಯುವ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಭಾರತ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಹೊಸ ಮಾರ್ಗಸೂಚಿಗಳ ಅಡಿಯಲ್ಲಿ, 5 ವರ್ಷದೊಳಗಿನ ಮಕ್ಕಳಿಗೆ ಆಗಮನ ಪೂರ್ವ ಮತ್ತು ನಂತರದ ಕೋವಿಡ್ ಪರೀಕ್ಷೆಗಳಿಂದ ವಿನಾಯಿತಿ ನೀಡಲಾಗಿದೆ.
ಭಾರತದ ಆರೋಗ್ಯ ಸಚಿವಾಲಯವು ಹೊರಡಿಸಿದ ಹೊಸ ಮಾರ್ಗಸೂಚಿಗಳ ಪ್ರಕಾರ, ಮಗು ಆಗಮಿಸಿದಾಗ ಅಥವಾ ಹೋಮ್ ಕ್ವಾರಂಟೈನ್ ಅವಧಿಯಲ್ಲಿ ಕೋವಿಡ್ನ ಲಕ್ಷಣ ಕಂಡುಬಂದರೆ ಮಾತ್ರ ಅದು ಕೋವಿಡ್ ಪರೀಕ್ಷೆಗೆ ಒಳಗಾಗಬೇಕು ಮತ್ತು ನಿಗದಿಪಡಿಸಿದ ಪ್ರೋಟೋಕಾಲ್ ಪ್ರಕಾರ ಚಿಕಿತ್ಸೆ ಪಡೆಯಬೇಕು. ಯಾವುದೇ ರೋಗಲಕ್ಷಣ ಇಲ್ಲದಿದ್ದರೆ ಪರೀಕ್ಷೆ ಬೇಕಾಗಿಲ್ಲ.
ಇತರ ದೇಶಗಳಲ್ಲಿ ಕೋವಿಡ್ ಉಲ್ಬಣಗೊಳ್ಳುತ್ತಿರುವ ಕಾರಣ ಸರ್ಕಾರವು ಅಂತರರಾಷ್ಟ್ರೀಯ ಪ್ರಯಾಣಕ್ಕಾಗಿ ಇತ್ತೀಚಿನ ಮಾರ್ಗಸೂಚಿಗಳನ್ನು ಹೊರಡಿಸಿದೆ ಮತ್ತು ನವೆಂಬರ್ 12 ರಿಂದ ಜಾರಿಗೆ ಬರಲಿದೆ.
ಹೊಸ ಮಾರ್ಗಸೂಚಿಗಳ ಪ್ರಕಾರ, ಡಬ್ಲ್ಯುಎಚ್ಒ ಅನುಮೋದಿತ ಕೋವಿಡ್-19 ಲಸಿಕೆಗಳನ್ನು ಪರಸ್ಪರ ಮಾನ್ಯ ಮಾಡಲು ಭಾರತವು ಒಪ್ಪಂದ ಮಾಡಿಕೊಂಡಿರುವ ದೇಶದಿಂದ ಬರುವ ಎರಡೂ ಡೋಸ್ ಲಸಿಕೆ ಪಡೆದ ಪ್ರಯಾಣಿಕರಿಗೆ ವಿಮಾನ ನಿಲ್ದಾಣದಿಂದ ಹೊರಹೋಗಲು ಅನುಮತಿಸಲಾಗುತ್ತದೆ ಮತ್ತು ನಂತರ 14 ದಿನಗಳ ಕಾಲ ಅವರು ಆರೋಗ್ಯವನ್ನು ಸ್ವಯಂ-ಮೇಲ್ವಿಚಾರಣೆ ಮಾಡಬೇಕಾಗುತ್ತದೆ.
ಒಂದು ಡೋಸ್ ಅಥವಾ ಲಸಿಕೆ ಹಾಕದ ಪ್ರಯಾಣಿಕರು ಭಾರತಕ್ಕೆ ಭೇಟಿ ನೀಡಿದರೆ, ಅವರು ಆಗಮನದ ನಂತರದ ಕೋವಿಡ್ -19 ಪರೀಕ್ಷೆಗಾಗಿ ಮಾದರಿಗಳನ್ನು ಆಗಮನದ ಹಂತದಲ್ಲಿ ಸಲ್ಲಿಸಬೇಕು, ಅದರ ನಂತರವೇ ಅವರನ್ನು ವಿಮಾನ ನಿಲ್ದಾಣದಿಂದ ಹೊರಬಿಡಲು ಅನುಮತಿಸಲಾಗುತ್ತದೆ. ಅವರು ಏಳು ದಿನಗಳ ಕಾಲ ಹೋಮ್ ಕ್ವಾರಂಟೈನ್ನಲ್ಲಿ ಇರಬೇಕಾಗುತ್ತದೆ ಮತ್ತು ಭಾರತಕ್ಕೆ ಆಗಮಿಸಿದ 8 ನೇ ದಿನದಂದು ಮರು-ಪರೀಕ್ಷೆಗೆ ಒಳಗಾಗಬೇಕಾಗುತ್ತದೆ ಮತ್ತು ಪಾಸಿಟಿವ್ ಬಂದರೆ ಮುಂದಿನ ಏಳು ದಿನಗಳವರೆಗೆ ಅವರ ಆರೋಗ್ಯವನ್ನು ಸ್ವಯಂ ಮೇಲ್ವಿಚಾರಣೆ ಮಾಡಬೇಕಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.