ಭೋಪಾಲ್: ಕಾಂಗ್ರೆಸ್ ಮುಖಂಡ ಸಲ್ಮಾನ್ ಖುರ್ಷಿದ್ ಅವರು ಅಯೋಧ್ಯೆ ತೀರ್ಪಿನ ಕುರಿತು ಹೊಸ ಪುಸ್ತಕವೊಂದನ್ನು ಬರೆದಿದ್ದು, ಇದರಲ್ಲಿ ಅವರು ಹಿಂದುತ್ವವನ್ನು ಇಸಿಸ್ ಉಗ್ರ ಸಂಘಟನೆಗೆ ಹೋಲಿಸಿ ವಿವಾದ ಸೃಷ್ಟಿ ಮಾಡಿದ್ದಾರೆ. ಈ ಪುಸ್ತಕವನ್ನು ಇದೀಗ ನಿಷೇಧ ಮಾಡಬೇಕು ಎಂಬ ಕೂಗು ಕೇಳಿ ಬರುತ್ತಿದೆ.
‘ಸನ್ರೈಸ್ ಓವರ್ ಅಯೋಧ್ಯೆ-ನೇಷನ್ಹುಡ್ ಇನ್ ಅವರ್ ಟೈಮ್ಸ್’ ಎಂಬುದು ಖುರ್ಷಿದ್ ಅವರ ಪುಸ್ತಕದ ಶೀರ್ಷಿಕೆಯಾಗಿದೆ.
ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರು ಈ ಬಗ್ಗೆ ಮಾತನಾಡಿ, ಕಾನೂನು ತಜ್ಞರನ್ನು ಸಂಪರ್ಕಿಸಿ ಅಯೋಧ್ಯೆ ತೀರ್ಪಿನ ಕುರಿತ ಸಲ್ಮಾನ್ ಖುರ್ಷಿದ್ ಅವರ ಹೊಸ ಪುಸ್ತಕವನ್ನು ರಾಜ್ಯದಲ್ಲಿ ನಿಷೇಧಿಸುವುದಾಗಿ ಹೇಳಿದ್ದಾರೆ.
“ಅವರು ಬಹಳ ವಿವಾದಾತ್ಮಕ ಪುಸ್ತಕವನ್ನು ಪ್ರಕಟಿಸಿದ್ದಾರೆ. ಅವರು ಮತ್ತು ಕಾಂಗ್ರೆಸ್ ‘ಹಿಂದುತ್ವ’ದ ಮೇಲೆ ದಾಳಿ ಮಾಡುವ ಅವಕಾಶವನ್ನು ಬಿಡುವುದಿಲ್ಲ, ಜಾತಿಗಳ ಆಧಾರದ ಮೇಲೆ ದೇಶವನ್ನು ವಿಭಜಿಸಲು ನಿರಂತರವಾಗಿ ಅವರು ಪ್ರಯತ್ನಿಸುತ್ತಲೇ ಬಂದಿದ್ದಾರೆ. ಸುಪ್ರೀಂಕೋರ್ಟ್ ಕೂಡ ಹಿಂದುತ್ವವು ಒಂದು ಜೀವನ ವಿಧಾನ ಎಂದು ಹೇಳಿದೆ” ಎಂದಿದ್ದಾರೆ.
“ವಿವಾದಗಳನ್ನು ಸೃಷ್ಟಿಸಲು ಈ ಪುಸ್ತಕವನ್ನು ಪ್ರಕಟಿಸಲಾಗಿದೆ. ಕಾಂಗ್ರೆಸ್ ಮತ್ತು ಗಾಂಧಿ ಕುಟುಂಬವು ‘ತುಕ್ಡೆ-ತುಕ್ಡೆ ಗ್ಯಾಂಗ್’ಗೆ ಸೇರಿದ್ದು, ಅವರು ದೇಶವನ್ನು ವಿಭಜಿಸಲು ಬಯಸುತ್ತಾರೆ. ಅವರು ಜನರ ನಂಬಿಕೆಗಳನ್ನು ನೋಯಿಸಲು ಬಯಸುತ್ತಾರೆ” ಎಂದಿದ್ದಾರೆ.
ಕಳೆದ ವಾರ ಬಿಡುಗಡೆಯಾದ ಈ ಪುಸ್ತಕದಲ್ಲಿ ಹಿಂದೂ ಧರ್ಮವನ್ನು ಭಯೋತ್ಪಾದನೆಯೊಂದಿಗೆ ಹೋಲಿಕೆ ಮಾಡಿದ್ದಾರೆ ಎಂದು ಆರೋಪಿಸಿ ಖುರ್ಷಿದ್ ವಿರುದ್ಧ ದೆಹಲಿ ಪೊಲೀಸರಿಗೆ ಇಬ್ಬರು ವಕೀಲರು ಗುರುವಾರ ದೂರು ಸಲ್ಲಿಸಿದ್ದಾರೆ.
ವಕೀಲ ವಿವೇಕ್ ಗಾರ್ಗ್ ಅವರು ತಮ್ಮ ದೂರಿನಲ್ಲಿ ಖುರ್ಷಿದ್ ವಿರುದ್ಧ ಪ್ರಕರಣ ದಾಖಲಿಸುವಂತೆ ಕೋರಿದ್ದಾರೆ.
ಹಿರಿಯ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಅವರು ಹಿಂದುತ್ವವನ್ನು ಐಸಿಸ್ ಮತ್ತು ಬೊಕೊ ಹರಾಮ್ನಂತಹ ಮೂಲಭೂತ ಭಯೋತ್ಪಾದಕ ಗುಂಪುಗಳಿಗೆ ಹೋಲಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಸಲ್ಮಾನ್ ಖರ್ಷಿದ್ ಅವರ ಪುಸ್ತಕ ಹಿಂದೂ ಭಾವನೆಗಳನ್ನು ಕೆರಳಿಸುತ್ತದೆ ಎಂದು ವಕೀಲ ವಿನೀತ್ ಜಿಂದಾಲ್ ಆರೋಪಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.