ನವದೆಹಲಿ: ನವೆಂಬರ್ 15 ರಂದು ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮದಿನವನ್ನು ʼಜನಜಾತಿ (ಬುಡಕಟ್ಟು) ಗೌರವ್ ದಿವಸ್ʼ ಎಂದು ಆಚರಿಸಲು ಸರ್ಕಾರ ನಿರ್ಧರಿಸಿದೆ. ಬಿರ್ಸಾ ಮುಂಡಾ ಅವರನ್ನು ದೇಶದಾದ್ಯಂತ ಇರುವ ಬುಡಕಟ್ಟು ಸಮುದಾಯಗಳು ಭಗವಾನ್ ಎಂದು ಪೂಜಿಸುತ್ತಾರೆ. ಹೀಗಾಗಿ ನ.15 ಅನ್ನು ವೀರ ಬುಡಕಟ್ಟು ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡ ಸ್ಮರಣಾರ್ಥವಾಗಿ ಸಮರ್ಪಿಸಲಾಗಿದೆ. ಇದರಿಂದ ಮುಂಬರುವ ಪೀಳಿಗೆಗಳು ದೇಶಕ್ಕಾಗಿ ಅವರ ತ್ಯಾಗದ ಬಗ್ಗೆ ತಿಳಿದುಕೊಳ್ಳಲು ಸಾಧ್ಯವಾಗಲಿದೆ.
ನವದೆಹಲಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಬುಡಕಟ್ಟು ವ್ಯವಹಾರಗಳ ಕೇಂದ್ರ ಸಚಿವ ಅರ್ಜುನ್ ಮುಂಡಾ, “ಬುಡಕಟ್ಟು ಜನರು, ಸಂಸ್ಕೃತಿ ಮತ್ತು ಸಾಧನೆಗಳ 75 ವರ್ಷಗಳ ಭವ್ಯ ಇತಿಹಾಸವನ್ನು ಆಚರಿಸಲು ಮತ್ತು ಸ್ಮರಿಸಲು ಭಾರತ ಸರ್ಕಾರವು ನವೆಂಬರ್ 15 ರಿಂದ ನವೆಂಬರ್ 22, 2021 ರವರೆಗೆ ಒಂದು ವಾರದ ಆಚರಣೆಗಳನ್ನು ಯೋಜಿಸಿದೆ” ಎಂದು ಹೇಳಿದರು.
ಈ ಸಂದರ್ಭದಲ್ಲಿ ದೇಶಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಆಚರಣೆಯ ಭಾಗವಾಗಿ, ರಾಜ್ಯ ಸರ್ಕಾರಗಳೊಂದಿಗೆ ಜಂಟಿಯಾಗಿ ಹಲವಾರು ಚಟುವಟಿಕೆಗಳನ್ನು ಯೋಜಿಸಲಾಗಿದೆ. ಭಾರತೀಯ ಸ್ವಾತಂತ್ರ್ಯ ಹೋರಾಟದಲ್ಲಿ ಆದಿವಾಸಿಗಳ ಸಾಧನೆಗಳು, ಶಿಕ್ಷಣ, ಆರೋಗ್ಯ, ಜೀವನೋಪಾಯ, ಮೂಲಸೌಕರ್ಯ ಮತ್ತು ಕೌಶಲ್ಯ ಅಭಿವೃದ್ಧಿಯಲ್ಲಿ ಭಾರತ ಸರ್ಕಾರ ಕೈಗೊಂಡ ವಿವಿಧ ಕಲ್ಯಾಣ ಕ್ರಮಗಳನ್ನು ಪ್ರದರ್ಶಿಸುವುದು ಪ್ರತಿ ಚಟುವಟಿಕೆಯ ಹಿಂದಿನ ವಿಷಯವಾಗಿದೆ ಎಂದು ಅವರು ಹೇಳಿದರು.
ಬುಡಕಟ್ಟು ಗೌರವ್ ದಿವಸ್ ಎಂದು ಆಚರಿಸಲಾಗುವ ನವೆಂಬರ್ 15 ರಂದು ಪ್ರಧಾನಿ ನರೇಂದ್ರ ಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.