ನವದೆಹಲಿ: ಸಂಸ್ಕೃತಿ ಸಚಿವಾಲಯವು ಆಜಾದಿ ಕಾ ಅಮೃತ್ ಮಹೋತ್ಸವದ ಭಾಗವಾಗಿ ಅಖಿಲ ಭಾರತ ನೃತ್ಯ ಸ್ಪರ್ಧೆ ʼವಂದೇ ಭಾರತಂ- ನೃತ್ಯ ಉತ್ಸವʼವನ್ನು ಆಯೋಜಿಸುತ್ತಿದೆ.
ನವದೆಹಲಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಂಸ್ಕೃತಿ ಖಾತೆ ರಾಜ್ಯ ಸಚಿವೆ ಮೀನಾಕ್ಷಿ ಲೇಖಿ, ಮುಂದಿನ ವರ್ಷ ಗಣರಾಜ್ಯೋತ್ಸವ ಪರೇಡ್ನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸುವ ನೃತ್ಯಗಾರರನ್ನು ಆಯ್ಕೆ ಮಾಡುವುದು ಈ ಸ್ಪರ್ಧೆಯ ಉದ್ದೇಶವಾಗಿದೆ. ಅಂತಿಮ ಪ್ರದರ್ಶನವು ಜನವರಿ 26 ರಂದು ರಾಜ್ಪಥ್, ಇಂಡಿಯಾ ಗೇಟ್ನಲ್ಲಿ ನಡೆಯಲಿದೆ ಎಂದಿದ್ದಾರೆ.
ನವೆಂಬರ್ 17 ರಿಂದ ಜಿಲ್ಲಾ ಮಟ್ಟದಲ್ಲಿ ವಂದೇ ಭಾರತಂ ಸಮೂಹ ನೃತ್ಯ ಸ್ಪರ್ಧೆ ಆರಂಭವಾಗಲಿದೆ. ಜಿಲ್ಲೆ, ರಾಜ್ಯ, ವಲಯ ಮತ್ತು ಅಂತರ ವಲಯ ಅಥವಾ ರಾಷ್ಟ್ರಮಟ್ಟದಲ್ಲಿ ಸ್ಪರ್ಧೆ ನಡೆಯಲಿದೆ. ಮುಂದಿನ ತಿಂಗಳು 19 ರಂದು ನವದೆಹಲಿಯ ಟಾಲ್ಕಟೋರಾ ಸ್ಟೇಡಿಯಂನಲ್ಲಿ ಅಂತಿಮ ರಾಷ್ಟ್ರೀಯ ಮಟ್ಟದ ಸ್ಪರ್ಧೆಯನ್ನು ಆಯೋಜಿಸಲಾಗುವುದು ಎಂದು ಲೇಖಿ ಹೇಳಿದ್ದಾರೆ.
ಭಾಗವಹಿಸುವವರು ಶಾಸ್ತ್ರೀಯ, ಜಾನಪದ, ಬುಡಕಟ್ಟು ಮತ್ತು ಫ್ಯೂಷನ್ ಅಥವಾ ಸಮಕಾಲೀನ ನಾಲ್ಕು ವಿಭಾಗಗಳಲ್ಲಿ ಪ್ರದರ್ಶನ ನೀಡಬಹುದಾಗಿದೆ. ಅಂತಿಮವಾಗಿ 480 ನರ್ತಕರನ್ನು ರಾಷ್ಟ್ರಮಟ್ಟದಿಂದ ವಿಜೇತರನ್ನಾಗಿ ಆಯ್ಕೆ ಮಾಡಲಾಗುವುದು ಮತ್ತು ಅವರು ಗಣರಾಜ್ಯೋತ್ಸವ ಪರೇಡ್ನಲ್ಲಿ ಸಾಂಸ್ಕೃತಿಕ ಪ್ರದರ್ಶನದಲ್ಲಿ ಪ್ರದರ್ಶನ ನೀಡಲಿದ್ದಾರೆ ಎಂದು ಸಚಿವರು ಹೇಳಿದ್ದಾರೆ.
ಈ ಸಂದರ್ಭದಲ್ಲಿ ಲೇಖಿ ಅವರು ಆಜಾದಿ ಕಾ ಅಮೃತ್ ಮಹೋತ್ಸವ ಆಪ್ ಅನ್ನು ಬಿಡುಗಡೆ ಮಾಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.