ನವದೆಹಲಿ: ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಕಾನೂನು ಸಚಿವ ಕಿರಣ್ ರಿಜಿಜು ಅವರು ಶನಿವಾರ ಸಿಟಿಜನ್ಸ್ ಟೆಲಿ ಲಾ ಮೊಬೈಲ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಿದರು.
ಅಲ್ಲದೇ ನವದೆಹಲಿಯಲ್ಲಿ ನಡೆದ ಈ ಸಮಾರಂಭದಲ್ಲಿ ಅವರು ಮುಂಚೂಣಿಯ ಕಾರ್ಯಕರ್ತರನ್ನು ಸನ್ಮಾನಿಸಿದರು. ಈ ಅಪ್ಲಿಕೇಶನ್ ಕಾನೂನು ಸಲಹೆ ಮತ್ತು ಸಮಾಲೋಚನೆಯನ್ನು ನೀಡುವ ಪ್ಯಾನಲ್ ವಕೀಲರೊಂದಿಗೆ ಫಲಾನುಭವಿಗಳನ್ನು ನೇರವಾಗಿ ಸಂಪರ್ಕಿಸುತ್ತದೆ.
ಈ ಮೊಬೈಲ್ ಅಪ್ಲಿಕೇಶನ್ ಆಂಡ್ರಾಯ್ಡ್ ಆವೃತ್ತಿಯಲ್ಲಿ ಡೌನ್ಲೋಡ್ ಮಾಡಲು Google Playstore ನಲ್ಲಿ ಲಭ್ಯವಿರುತ್ತದೆ. ಈ ಆ್ಯಪ್ ದೇಶದ ಜನರಿಗೆ ಕಾನೂನು ಅಂಶಗಳ ದೃಷ್ಟಿಯಿಂದ ಸಾಕಷ್ಟು ಸೇವೆ ಸಲ್ಲಿಸಲಿದೆ ಎಂದು ರಿಜ್ಜು ಹೇಳಿದ್ದಾರೆ.
ನಾಗರಿಕರನ್ನು ಸಬಲೀಕರಣಗೊಳಿಸುವ ಮತ್ತು ದೇಶದ ಅಭಿವೃದ್ಧಿಗೆ ಉತ್ತೇಜನ ನೀಡುವ ದೃಷ್ಟಿಯಿಂದ ನಮ್ಮ ಕಾರ್ಯ ವ್ಯವಸ್ಥೆಯಲ್ಲಿ ಬದಲಾವಣೆಗಳನ್ನು ತರುವ ಅಗತ್ಯವಿದೆ. ಅತೀ ಬಡವರಿಗೂ ಯಾವುದೇ ಸೇವೆಗಳ ಮೂಲಕ ನ್ಯಾಯ ಒದಗಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.