ನವದೆಹಲಿ: ಬುಡಕಟ್ಟು ಜನಾಂಗದ ಸ್ವಾತಂತ್ರ್ಯ ಹೋರಾಟಗಾರ ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮದಿನವನ್ನು ಇಂದು ಬುಡಕಟ್ಟು ಜನರ ಗೌರವ ದಿನ ಎಂದು ಕೇಂದ್ರ ಸರ್ಕಾರ ಆಚರಿಸುತ್ತಿದೆ.
ಇಂದು ಬೆಳಗ್ಗೆ 9.45ಕ್ಕೆ ರಾಂಚಿಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಂದ ಭಗವಾನ್ ಬಿರ್ಸಾ ಮುಂಡಾ ಸ್ಮೃತಿ ಉದಯನ್ ಸಹ ಸ್ವತಂತ್ರ ಸೇನಾನಿ ಸಂಗ್ರಹಾಲಯ ಉದ್ಘಾಟನೆ ನೆರವೇರಿಸಲಿದ್ದಾರೆ.
38 ಎಕರೆ ಪ್ರದೇಶದಲ್ಲಿ ಹರಡಿರುವ, ರಾಂಚಿಯ ಅತ್ಯಾಧುನಿಕ ಭಗವಾನ್ ಬಿರ್ಸಾ ಮುಂಡಾ ಸ್ಮೃತಿ ಉದಯನ್ ಸಹ್ ಸ್ವತಂತ್ರ ಸೇನಾನಿ ಸಂಗ್ರಹಾಲಯವು ಭಗವಾನ್ ಬಿರ್ಸಾ ಮುಂಡ ಅವರ ಜನ್ಮ ವಾರ್ಷಿಕೋತ್ಸವವನ್ನು ಬುಡಕಟ್ಟು ಜನರ ಗೌರವ ದಿನ ಆಗಿ ಆಚರಿಸಲು ಸಕಲ ರೀತಿಯಲ್ಲಿ ಸನ್ನದ್ಧವಾಗಿದೆ.
ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ ಅವರು ನಿನ್ನೆ ಹಳೆಯ ಸೆಂಟ್ರಲ್ ಜೈಲ್ ಆವರಣಕ್ಕೆ ಭೇಟಿ ನೀಡಿ ಸ್ಮಾರಕ ಪಾರ್ಕ್ ಕಮ್ ಮ್ಯೂಸಿಯಂ ಉದ್ಘಾಟನೆಗೆ ಮುನ್ನ ಅಂತಿಮ ಸಿದ್ಧತೆಗಳನ್ನು ಖಚಿತಪಡಿಸಿಕೊಂಡಿದ್ದಾರೆ.
ಈ ಬಗ್ಗೆ ಮಾತನಾಡಿದ ಸಚಿವರು, ಸಂಗ್ರಹಾಲಯದಲ್ಲಿ ಭಗವಾನ್ ಬಿರ್ಸಾ ಮುಂಡಾ ಅವರ 25 ಅಡಿ ಎತ್ತರದ ಪ್ರತಿಮೆ ಪ್ರಮುಖ ಆಕರ್ಷಣೆಯಾಗಿದ್ದು, ಬುಡಕಟ್ಟು ಚಳವಳಿಯ ಇತರ 13 ಸ್ವಾತಂತ್ರ್ಯ ಹೋರಾಟಗಾರರ 9 ಅಡಿ ಎತ್ತರದ ಪ್ರತಿಮೆಯು ಬುಡಕಟ್ಟು ಸಂಸ್ಕೃತಿ ಮತ್ತು ಇತಿಹಾಸವನ್ನು ಸಂರಕ್ಷಿಸುವ ಮತ್ತು ಉತ್ತೇಜಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹೇಳಿದರು.
ಬಿರ್ಸಾ ಮುಂಡಾ ಅವರ ಜೀವನ ಮತ್ತು ತ್ಯಾಗದ ಕುರಿತು ಸಿದ್ಧಪಡಿಸಲಾದ ಅರ್ಧ ಗಂಟೆಯ ಸಂಗೀತ ಸಾಕ್ಷ್ಯಚಿತ್ರ ಎಲ್ಲರ ಗಮನ ಸೆಳೆದಿದೆ.
ಬಿರ್ಸಾ ಮುಂಡಾ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಟ್ವಿಟರ್ ಮೂಲಕ ಮಹಾನ್ ಸ್ವತಂತ್ರ ಹೋರಾಟಗಾರನಿಗೆ ನಮನವನ್ನು ಸಲ್ಲಿಸಿದ್ದಾರೆ.
भगवान बिरसा मुंडा जी को उनकी जयंती पर आदरपूर्ण श्रद्धांजलि। वे स्वतंत्रता आंदोलन को तेज धार देने के साथ-साथ आदिवासी समाज के हितों की रक्षा के लिए सदैव संघर्षरत रहे। देश के लिए उनका योगदान हमेशा स्मरणीय रहेगा।
— Narendra Modi (@narendramodi) November 15, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.